ವಿಜಯಪುರ: ಕೊಳಗೇರಿ ನಿವಾಸಿಗಳಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ತಟ್ಟೆ ಬಾರಿಸುವುದರ ಮೂಲಕ ರಂಗೀನ ಮಸೀದಿ ಹಿಂಭಾಗದ ಕೊಳಗೇರಿ ನಿವಾಸಿಗಳು ಪ್ರತಿಭಟನೆ ನಡಸಿದರು.
ಲಾಕ್ಡೌನ್ದಿಂದ ಸಂಕಷ್ಟದಲ್ಲಿದ್ದೇವೆ. ಸ್ಲಂ ನಿವಾಸಿಗಳಿಗೆ ಮನೆ ಬಾಡಿಗೆ ಪಾವತಿಸುವುದಿರಲಿ, ತುತ್ತು ಊಟಕ್ಕಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಈ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿ ಎಡಿಸಿ ಔದ್ರಾಮ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.