ಕರ್ನಾಟಕ

karnataka

By

Published : Jul 11, 2021, 7:18 PM IST

ETV Bharat / state

ಹುತಾತ್ಮ ಯೋಧನ ಕುಟುಂಬಕ್ಕೆ ಉದ್ಯೋಗ ಕೊಡಿಸುವ ಭರವಸೆ ನೀಡಿದ ಸುನೀಲಗೌಡ ಪಾಟೀಲ‌

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಹುತಾತ್ಮ ಯೋಧ ಕಾಶಿರಾಯ ಬೊಮ್ಮನಹಳ್ಳಿ ಕುಟುಂಬದವರನ್ನು ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ‌ ಭೇಟಿ ಮಾಡಿ ಸಾಂತ್ವನ ಹೇಳಿದರು.

Sunil Gowda Patil
ಹುತಾತ್ಮ ಯೋಧನ ಕುಟುಂಬ

ವಿಜಯಪುರ: ಪುಲ್ವಾಮ ದಾಳಿಯಲ್ಲಿ ವೀರಮರಣ ಹೊಂದಿದ ಜಿಲ್ಲೆಯ ಯೋಧ ಕಾಶಿರಾಯ ಬೊಮ್ಮನಹಳ್ಳಿ‌ ಕುಟುಂಬವನ್ನು ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ‌ ಭೇಟಿಯಾಗಿ ಯೋಧನ ಪತ್ನಿಗೆ ಉದ್ಯೋಗ ನೀಡುವ ಭರವಸೆ ನೀಡಿದರು.

ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಹುತಾತ್ಮ ಯೋಧ ಕಾಶಿರಾಯ ಬೊಮ್ಮನಹಳ್ಳಿ ಕುಟುಂಬದವರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ ಸುನೀಲಗೌಡ ಪಾಟೀಲ ಅವರು, ಯೋಧನ ಪತ್ನಿ ಸಂಗೀತಾ ಬೊಮ್ಮನಹಳ್ಳಿಗೆ ಬಿಎಲ್​ಡಿಇ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿದರು. ಜೊತೆಗೆ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದಾಗಿ ತಿಳಿಸಿದರು. ನಂತರ ಯೋಧನ ಅಂತ್ಯಕ್ರಿಯೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು.

ABOUT THE AUTHOR

...view details