ಕರ್ನಾಟಕ

karnataka

ETV Bharat / state

ಬೈಕ್​ - ಕಾರಿನ ನಡುವೆ ಮುಖಾಮುಖಿ ಡಿಕ್ಕಿ: ಗುರು -ಶಿಷ್ಯ ಸ್ಥಳದಲ್ಲೇ ಸಾವು - ವಿಜಯಪುರದಲ್ಲಿ ರಸ್ತೆ ಅಪಘಾತ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚಿಕ್ಕಬೇವನೂರ್ ಬಸ್ ನಿಲ್ದಾಣ ಬಳಿ ನಡೆದ ಅಪಘಾತದಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Teacher and student died in vijayapura road accident
ವಿಜಯಪುರದ ರಸ್ತೆ ಅಪಘಾತದಲ್ಲಿ ಶಿಕ್ಷಕ, ವಿದ್ಯಾರ್ಥಿ ಸಾವು

By

Published : Dec 17, 2021, 8:22 PM IST

ವಿಜಯಪುರ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಶಿಕ್ಷಕ ಹಾಗೂ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಚಿಕ್ಕಬೇವನೂರ್ ಬಸ್ ನಿಲ್ದಾಣ ಬಳಿ ನಡೆದಿದೆ.

ಶಿಕ್ಷಕ ಶಿವಪ್ಪ ಈರಪ್ಪ ಜಾಮಗೊಂಡ ಹಾಗೂ ರಾಹುಲ್ ಅಶೋಕ ನಾಯ್ಕೋಡಿ ಮೃತರು ಎಂದು ಗುರುತಿಸಲಾಗಿದೆ. ಶಿಕ್ಷಕ, ವಿದ್ಯಾರ್ಥಿಯೊಂದಿಗೆ ಬೈಕ್​​​ನಲ್ಲಿ ಸೋಲಾಪುರದಿಂದ ವಿಜಯಪುರಕ್ಕೆ ತೆರಳುತ್ತಿದ್ದರು. ಈ ವೇಳೆ, ಎದುರಿಗೆ ಬಂದ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಗುರು -ಶಿಷ್ಯ ಸಾವನ್ನಪ್ಪಿದ್ದಾರೆ.

ಘಟನೆ ಬಳಿಕ ಕಾರಿನ ಚಾಲಕ ಪರಾರಿಯಾಗಿದ್ದು, ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೇಂದ್ರ ಮಾಜಿ ಸಚಿವ ಆರ್​ ಎಲ್​​​ ಜಾಲಪ್ಪ ವಿಧಿವಶ.. ರಾಜ್ಯ ನಾಯಕರ ಸಂತಾಪ

ABOUT THE AUTHOR

...view details