ಕರ್ನಾಟಕ

karnataka

ETV Bharat / state

ಧಾರಾಕಾರ ಮಳೆ... ಜಲಾವೃತ ಸಂಗಮನಾಥನಿಗೆ ನೀರಲ್ಲೇ ವಿಶೇಷ ಪೂಜೆ - undefined

ರಾತ್ರಿ‌ ಸುರಿದ ಮಳೆಯಿಂದಾಗಿ ಹಳ್ಳದ ಪಕ್ಕದಲ್ಲಿರುವ ಸಂಗಮನಾಥ ದೇವಸ್ಥಾನ ಜಲಾವೃತವಾಗಿದೆ. ಮೊಣಕಾಲಿನ ವರೆಗೆ ನೀರು ನಿಂತಿದ್ದರೂ ನೀರಿನಲ್ಲೇ ಸಂಗಮನಾಥನಿಗೆ ಪೂಜೆ ಸಲ್ಲಿಸಲಾಗಿದೆ.

ಸಂಗಮನಾಥ ದೇವಸ್ಥಾನ ಜಲಾವೃತ

By

Published : Jun 24, 2019, 11:49 AM IST

ವಿಜಯಪುರ: ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ತಿಕೋಟಾ ತಾಲೂಕಿನ ಕಳ್ಳಕವಟಗಿ ಸಂಗಮನಾಥ ಹಳ್ಳ ತುಂಬಿ ಹರಿಯುತ್ತಿದೆ. 3-4 ವರ್ಷದಿಂದ ಮಳೆ ಬಾರದ ಕಾರಣ ಹಳ್ಳದಲ್ಲಿ ನೀರು ಇರಲಿಲ್ಲ. ರಾತ್ರಿ‌ ಸುರಿದ ಮಳೆಯಿಂದಾಗಿ ಹಳ್ಳದ ಪಕ್ಕದಲ್ಲಿರುವ ಸಂಗಮನಾಥ ದೇವಸ್ಥಾನ ಜಲಾವೃತವಾಗಿದೆ. ಮೊಣಕಾಲಿನ ವರೆಗೆ ನೀರು ನಿಂತಿದ್ದರೂ ಸಹ ನೀರಿನಲ್ಲೇ ಸಂಗಮನಾಥನಿಗೆ ಪೂಜೆ ಸಲ್ಲಿಸಲಾಗಿದೆ.

ನೀರಿನೊಂದಿಗೆ ಹರಿದು ಹೋದ ಪಲ್ಲಕ್ಕಿ :

ರಾತ್ರಿಯಿಡಿ ಸುರಿದ ಭಾರಿ ಮಳೆಗೆ ದೇವಸ್ಥಾನದ ಹೊರಗಡೆ ಇಟ್ಟಿದ್ದ ದೇವರ ಪಲ್ಲಕ್ಕಿ ಸಹ ಹಳ್ಳದಲ್ಲಿ ಹರಿದುಕೊಂಡು ಹೋಗಿದೆ. ದೇವಸ್ಥಾನದ ಗರ್ಭಗುಡಿಯಲ್ಲಿ ನೀರು‌ ನುಗ್ಗಿದ ಹಿನ್ನೆಲೆ ಇಂದಿನ ಪೂಜಾ ಕಾರ್ಯಕ್ರಮ ದೇವಸ್ಥಾನದ ಹೊರಗಡೆ ನಡೆಯಿತು.

ಸಂಗಮನಾಥ ದೇವಸ್ಥಾನ ಜಲಾವೃತ

ರೈತರ ಮೊಗದಲ್ಲಿ ಸಂತಸ :

ದ್ರಾಕ್ಷಿ ಬೆಳೆಗಾರರ ಪಾಲಿಗೆ ಮಳೆ ವರವಾಗಿದೆ. ಇಂದಿನಿಂದ ರೈತರು ದ್ರಾಕ್ಷಿ ಕಟಾವು ಮಾಡಲು ಪ್ರಾರಂಭಿಸಿದ್ದಾರೆ. ಕಳ್ಳಕವಟಗಿ, ಘೋಣಸಗಿ, ಬಾಬಾನಗರ, ತಿಕೋಟಾ, ಬಿಜ್ಜರಗಿ, ಹುಬನೂರ, ಟಕ್ಕಳಕಿ, ಸೋಮದೇವರಹಟ್ಟಿ ಎಲ್ಲ ಭಾಗಗಳಲ್ಲೂ ಮಳೆಯಾಗಿದೆ.

For All Latest Updates

TAGGED:

ABOUT THE AUTHOR

...view details