ಕರ್ನಾಟಕ

karnataka

ETV Bharat / state

ವೇಗವಾಗಿ ಬಂದ ಲಾರಿ ಬೈಕ್​ಗೆ ಡಿಕ್ಕಿ: ಒಂದೇ ಕುಟುಂಬದ ಮೂವರು ಬಲಿ

ಲಾರಿ ಚಾಲಕನ ವೇಗವಾದ ಚಾಲನೆಗೆ ಒಂದೇ ಕುಟುಂಬದ ಮೂವರು ಬಲಿಯಾಗಿದ್ದಾರೆ. ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

By

Published : Apr 26, 2019, 8:54 PM IST

ಅಪಘಾತ

ವಿಜಯಪುರ:ಬೈಕ್​​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ 13ರ ತಿಡಗುಂದಿ ಬಳಿ ಸಂಭವಿಸಿದೆ.

ಬಾಳು ಪಾಂಡ್ರೆ (45), ಪತ್ನಿ ದುರ್ಗಾ ಪಾಂಡ್ರೆ (38) ಹಾಗೂ ಸೀತಾಬಾಯಿ ಪಾಂಡ್ರೆ ಮೃತಪಟ್ಟವರು. ಇವರು ವಿಜಯಪುರದಿಂದ ತಿಡಗುಂದಿಗೆ ಬೈಕ್​​ನಲ್ಲಿ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.

ತಿಡಗುಂದಿ ಬಳಿ ವೇಗವಾಗಿ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರೂ ಸಾವಿಗೀಡಾಗಿದ್ದಾರೆ. ಅಪಘಾತದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

For All Latest Updates

TAGGED:

ABOUT THE AUTHOR

...view details