ಕರ್ನಾಟಕ

karnataka

ETV Bharat / state

ನಾಡ ಕೋವಿಯಿಂದ ಗಾಳಿಯಲ್ಲಿ ಗುಂಡು ಹಾರಿಸಿದ ತಾ.ಪಂ ಮಾಜಿ ಉಪಾಧ್ಯಕ್ಷ: ವಿಡಿಯೋ - ನಾಡ ಕೋವಿಯಿಂದ ಗಾಳಿಯಲ್ಲಿ ಗುಂಡು

ಬಸರಕೋಡದ ತಾ.ಪಂ ಮಾಜಿ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ್ ಗಾಳಿಯಲ್ಲಿ ಗುಂಡು ಹಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

TP Former vice president firing in the Air
ನಾಡ ಕೋವಿಯಿಂದ ಗಾಳಿಯಲ್ಲಿ ಗುಂಡು ಹಾರಿಸಿದ ತಾ.ಪಂ ಮಾಜಿ ಉಪಾಧ್ಯಕ್ಷ

By

Published : Jun 25, 2021, 9:37 AM IST

ಮುದ್ದೇಬಿಹಾಳ: ತಾಲೂಕು ಪಂಚಾಯತ್​ ಮಾಜಿ ಉಪಾಧ್ಯಕ್ಷರೊಬ್ಬರು ನಾಡ ಕೋವಿಯಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಗುರುವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಾಡ ಕೋವಿಯಿಂದ ಗಾಳಿಯಲ್ಲಿ ಗುಂಡು ಹಾರಿಸಿದ ತಾ.ಪಂ ಮಾಜಿ ಉಪಾಧ್ಯಕ್ಷ

ಬಸರಕೋಡದ ತಾ.ಪಂ ಮಾಜಿ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ್ ಗಾಳಿಯಲ್ಲಿ ಗುಂಡು ಹಾರಿಸಿದವರು. ಕಾರ ಹುಣ್ಣಿಮೆ ನಿಮಿತ್ತ ಗ್ರಾಮದಲ್ಲಿ ಕರಿ ಹರಿಯುವ ಮುನ್ನ ಈ ಘಟನೆ ನಡೆದಿದ್ದು ಅನುಮತಿ ಪಡೆದು ಬಂದೂಕಿನಿಂದ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗಿದೆ.

ಯಾವುದೇ ಸುರಕ್ಷಿತ ವಾತಾವರಣದಲ್ಲಿ ಗುಂಡು ಹಾರಿಸದೆ ಜನರ ಗುಂಪಿನಲ್ಲಿ ಗುಂಡು ಹಾರಿಸಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ. ಸಂಪ್ರದಾಯದಂತೆ ಗ್ರಾಮೀಣ ಪ್ರದೇಶಗಳಲ್ಲಿ ಗೌಡಕಿ ಇದ್ದ ಮನೆತನಗಳಲ್ಲಿ ಈ ರೀತಿಯ ಪದ್ಧತಿ ಇದೆ ಎನ್ನಲಾಗುತ್ತಿದೆ.

ಆದರೂ ಗ್ರಾಮ ಪಂಚಾಯಿತಿ ಕಟ್ಟಡದ ಮುಂದೆ ಜನರನ್ನು ಸುತ್ತಮುತ್ತಲಿನಲ್ಲಿ ನಿಲ್ಲಿಸಿಕೊಂಡು ಗುಂಡು ಹಾರಿಸಿರುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ABOUT THE AUTHOR

...view details