ಕರ್ನಾಟಕ

karnataka

By

Published : Sep 14, 2020, 3:18 PM IST

ETV Bharat / state

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಇಬ್ಬರ ಬಂಧನ

ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಹಿನ್ನೆಲೆ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಎಂ ಕೆ ದ್ಯಾಮಣ್ಣವರ ನೇತೃತ್ವದಲ್ಲಿ ಬಬಲೇಶ್ವರ ಠಾಣೆ ಪಿಎಸ್‌ಐ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು..

Arrest
Arrest

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ ಅಂದಾಜು 1.40 ಲಕ್ಷ ರೂ. ಮೌಲ್ಯದ 18.80 ಕೆಜಿ ಗಾಂಜಾ ಜಪ್ತಿ ಮಾಡಿ ಇಬ್ಬರು ಆರೋಪಿಗಳನ್ನು ಪೊಲೀಸರುಬಂಧಿಸಿದ್ದಾರೆ.

ಚಂದ್ರಶೇಖರ ವಿಠ್ಠಲ ಹಳಿಜೋಳ (31), ಮುತ್ತಪ್ಪ ಮುದಕಪ್ಪ ಹಳಿಜೋಳ (21) ಬಂಧಿತ ಆರೋಪಿಗಳು. ಇವರು ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಹಿನ್ನೆಲೆ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಎಂ ಕೆ ದ್ಯಾಮಣ್ಣವರ ನೇತೃತ್ವದಲ್ಲಿ ಬಬಲೇಶ್ವರ ಠಾಣೆ ಪಿಎಸ್‌ಐ ಹಾಗೂ ಸಿಬ್ಬಂದಿ ದಾಳಿ ನಡೆಸಿ, ಗಾಂಜಾ ಜಪ್ತಿ ಮಾಡಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸಂಬಂಧ ಬಬಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details