ಕರ್ನಾಟಕ

karnataka

By

Published : Feb 17, 2022, 12:14 PM IST

ETV Bharat / state

ವಿಜಯಪುರ: ಖಾಸಗಿ ಬಸ್-ಬೈಕ್ ನಡುವೆ ಅಪಘಾತ, ಸ್ಥಳದಲ್ಲೇ ಇಬ್ಬರು ಸಾವು

ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಖಾಸಗಿ ಬಸ್-ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ.

two died by accident in vijayapura
ವಿಜಯಪುರದಲ್ಲಿ ಆ್ಯಕ್ಸಿಡೆಂಟ್

ವಿಜಯಪುರ: ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ದುರ್ಮರಣಕ್ಕೀಡಾದ ಘಟನೆ ಕಳೆದ ತಡರಾತ್ರಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ನಡೆದಿದೆ.


ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಈ ಅವಘಡ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರರಾದ ಮಲ್ಲಪ್ಪ ಮಂಕಣಿ (24), ಯಲ್ಲನಗೌಡ ಮಂಕಣಿ (23) ಸಾವನ್ನಪ್ಪಿದ್ದಾರೆ. ಇಬ್ಬರೂ ನಿಡಗುಂದಿ ತಾಲೂಕಿನ ಅಬ್ಬಿಹಾಳ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ.‌

ಇದನ್ನೂ ಓದಿ:ಧಾರವಾಡ: ರಸ್ತೆ ಅಪಘಾತದಲ್ಲಿ ವೈದ್ಯ ಸಾವು

ನಿಡಗುಂದಿಯಿಂದ ಸ್ವಗ್ರಾಮ ಅಬ್ಬಿಹಾಳಕ್ಕೆ ಬೈಕ್ ಮೂಲಕ ತೆರಳುತ್ತಿದ್ದ ವೇಳೆ ಎದುರಿನಿಂದ ಖಾಸಗಿ ಬಸ್ ಬಂದಿದ್ದು, ಎರಡೂ ವಾಹನಗಳು ಡಿಕ್ಕಿ ಹೊಡೆದಿವೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

...view details