ವಿಜಯಪುರ: ನಗರದ ಪ್ರಮುಖ ಸ್ಥಳಗಳಿಗೆ ಮೌಲಾನಾ ಅಬುಲ್ ಕಲಾಂ ಆಜಾದ್ ಹೆಸರಿಡುವಂತೆ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಮೀರ್ ಅಹಮ್ಮದ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ದೇಶದ ಮೊದಲ ಶಿಕ್ಷಣ ಮಂತ್ರಿ ಆಜಾದ್ ಅವರು ಭಾರತ ವಿಭಜನೆಯನ್ನು ವಿರೋಧಿಸಿ ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರ. ದೇಶ ಕಟ್ಟುವಲ್ಲಿ ಅವರ ಪಾತ್ರ ಪ್ರಮುಖವಾಗಿದ್ದು, ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ. ಆದ್ದರಿಂದನಗರದ ರಸ್ತೆ, ವೃತ್ತ ಹಾಗೂ ಹಲವು ಪ್ರದೇಶಗಳಿಗೆ ಆಜಾದ್ ಅವರ ಹೆಸರಿಡಿ ಎಂದು ಕೋರಲಾಯಿತು.
ಇನ್ನು ಕಾಂಗ್ರೆಸ್ ಮನವಿ ಸ್ವೀಕರಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಹೆಚ್.ಪ್ರಸಾದ್, ತಕ್ಷಣವೇ ತಮ್ಮ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.