ವಿಜಯಪುರ:ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಬಾಣಂತಿಯರ ಸಿಜಿರಿನ್ ಹೊಲಿಗೆ ಬಿಚ್ಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಮೇ 17 ರಂದು ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ 21 ಬಾಣಂತಿಯರ ಸಿಜಿರಿನ್ ಹೊಲಿಗೆ ಬಿಚ್ಚಿಕೊಂಡು ಸೋಂಕು ಕಾಣಿಸಿಕೊಂಡಿತ್ತು. ಅದಕ್ಕಾಗಿ ಉಪ ಲೋಕಾಯುಕ್ತ ಬಿ.ಎಸ್. ಪಾಟೀಲ ಭೇಟಿ ನೀಡಿ ಪರಿಶೀಲನೆ ಕೂಡಾ ನಡೆಸಿದ್ದರು. ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ಯು/ಎಸ್, 7(2) ಮತ್ತು 9(3)(ಎ) ಅಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜಕುಮಾರ ಯರಗಲ್, ಶಸ್ತ್ರಚಿಕಿತ್ಸಕ ಡಾ.ಸಂಗಣ್ಣ ಲಕ್ಕಣ್ಣವರ, ರೆಸಿಡೆಂಟ್ ಮೆಡಿಕಲ್ ಆಫೀಸರ್ ಡಾ.ಎ.ಜಿ.ಬಿರಾದಾರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.