ವಿಜಯಪುರ: ಕೊರೊನಾ ಸೋಂಕಿತ ವ್ಯಕ್ತಿಯ ಸಾವಿನಿಂದ ರೊಚ್ಚಿಗೆದ್ದ ಸಂಬಂಧಿಕರು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಪ್ರಕರಣ ದಾಖಲಿಸಲು ವೈದ್ಯರು ಮುಂದಾಗಿದ್ದಾರೆ.
ಈ ಸಂಬಂಧ ಮಾತನಾಡಿರುವ ವಿಜಯಪುರ ಬಂಜಾರಾ ಆಸ್ಪತ್ರೆ ಆಡಳಿತಾಧಿಕಾರಿ ಡಾ. ದೀಪಕ ಆರ್ ಚವ್ಹಾಣ, ರೋಗಿ ಆಸ್ಪತ್ರೆಗೆ ಬಂದಾಗ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ ಕೊರೊನಾ ಪಾಸಿಟಿವ್ ಇತ್ತು. ಪ್ರತಿದಿನ ಐದು ಜನ ವೈದ್ಯರ ತಂಡ ರೋಗಿಯ ಆರೋಗ್ಯ ತಪಾಸಣೆ ನಡೆಸಿದ್ದಾರೆ. ನಿನ್ನೆ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಸಂಬಂಧಿಕರಿಗೆ ತಿಳಿಸಿದ್ದೆವು. ಅವರು ಚಿಕಿತ್ಸೆ ಮುಂದುವರೆಸಿ ಎಂದು ಕೇಳಿದ್ದರು. ಅಲ್ಲದೇ ರೋಗಿಯ ಸಂಬಂಧಿಕರು ಹಣವನ್ನೂ ಕಟ್ಟಿದ್ದರು ಎಂದು ಹೇಳಿದ್ದಾರೆ.