ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆ. 25ರಂದು ಭೇಟಿ ನೀಡಲಿರುವ ಹಿನ್ನೆಲೆ, ಇಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಕೆಬಿಜೆಎನ್ ಎಲ್ ಮುಖ್ಯ ಅಭಿಯಂತರ ಪಿ.ಆರ್. ಕುಲಕರ್ಣಿ ಹಾಗೂ ಇತರೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.
ಆ. 25ರಂದು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೆಲಿಕ್ಯಾಫ್ಟರ್ ಮೂಲಕ ಆಲಮಟ್ಟಿಗೆ ಮಧ್ಯಾಹ್ನ 12ಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಕಂದಾಯ ಸಚಿವ ಆರ್. ಅಶೋಕ್ ಆಗಮಿಸಲಿದ್ದು, ಆಲಮಟ್ಟಿ ಜಲಾಶಯ ವೀಕ್ಷಣೆ ಮಾಡಲಿದ್ದಾರೆ.