ಕರ್ನಾಟಕ

karnataka

ETV Bharat / state

ರಸ್ತೆ ದುರಸ್ಥಿಗೆ ಆಗ್ರಹಿಸಿ ಸಾರ್ವಜನಿಕರಿಂದ ಪ್ರತಿಭಟನೆ - vijayapura leatest news

ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಲು ಆಗ್ರಹಿಸಿ, ವಿಜಯಪುರ ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು..

Vijayapura Protest from public demanding road construction
ವಿಜಯಪುರ: ರಸ್ತೆ ದುರಸ್ಥಿಗೆ ಆಗ್ರಹ, ಸಾರ್ವಜನಿಕರಿಂದ ಪ್ರತಿಭಟನೆ

By

Published : Sep 20, 2020, 3:27 PM IST

Updated : Sep 20, 2020, 4:37 PM IST

ವಿಜಯಪುರ :ರಾತ್ರಿ ಸುರಿದ ಭಾರಿ ಮಳೆಯಿಂದ ರಸ್ತೆಗಳ ಮೇಲೆ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ರಸ್ತೆ ದುರಸ್ಥಿಗೆ ಆಗ್ರಹಿಸಿ ಸಾರ್ವಜನಿಕರಿಂದ ಪ್ರತಿಭಟನೆ ನಡೆಸಲಾಯಿತು.

ರಸ್ತೆ ದುರಸ್ಥಿಗೆ ಆಗ್ರಹಿಸಿ ಸಾರ್ವಜನಿಕರಿಂದ ಪ್ರತಿಭಟನೆ

ವಿಜಯಪುರ ನಗರದ ಗಣೇಶನಗರ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ಮಾಡಲಾಯಿತು. ರೇಲ್ವೆ ಓವರ್ ಬ್ರಿಡ್ಜ್‌ಗಾಗಿ ಪ್ರಗತಿಯಲ್ಲಿರುವ ಕಾಮಗಾರಿಯಿಂದ ಕೆರೆಗಳಂತಾದ ರಸ್ತೆಗಳಿಂದ ಸಾರ್ವಜನಿಕರು ನಡೆದಾಡುವುದು ಕಷ್ಟವಾಗಿದೆ.

ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಲು ಆಗ್ರಹಿಸಿ, ವಿಜಯಪುರ ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

Last Updated : Sep 20, 2020, 4:37 PM IST

ABOUT THE AUTHOR

...view details