ವಿಜಯಪುರ: ಮಹಾನಗರ ಪಾಲಿಕೆ, ಪಟ್ಟಣ ಪಂಚಾಯತ ಹಾಗೂ ನಗರ ಸಭೆಗಳಲ್ಲಿ ಕರ್ಮಚಾರಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
ಸಪಾಯಿ ಕರ್ಮಚಾರಿಗಳಿಗೆ ಸೌಕರ್ಯಗಳನ್ನು ಕಲ್ಪಿಸುವಂತೆ ವಿಜಯಪುರ ಡಿಸಿ ಸೂಚನೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಪಾಯಿ ಕರ್ಮಚಾರಿಗಳ ಅಭಿವೃದ್ಧಿ ಸಭೆಯಲ್ಲಿ ಅವರು, ಜಿಲ್ಲೆಯಲ್ಲಿ ಸಪಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು. ಅವರಿಗೆ ಸರ್ಕಾರದಿಂದ ನೀಡುವ ಸವಲತ್ತುಗಳನ್ನು ಒದಗಿಸಬೇಕು. ಅಲ್ಲದೆ ಸರಿಯಾಗಿ ವೇತನವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಪಾಯಿ ಕರ್ಮಚಾರಿಗಳ ಅಭಿವೃದ್ಧಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಪಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು. ಅವರಿಗೆ ಸರ್ಕಾರದಿಂದ ನೀಡುವ ಸವಲತ್ತುಗಳನ್ನು ಒದಗಿಸಬೇಕು. ಅಲ್ಲದೆ ಸರಿಯಾಗಿ ವೇತನವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು.
ಪೌರ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಕಾಲಕಾಲಕ್ಕೆ ಒದಗಿಸಲಾಗುತ್ತಿದೆ. ವೇತನ ಹೆಚ್ಚಿಸುವಂತೆ ಕೆಲ ಕಾರ್ಮಿಕರಿಂದ ಬೇಡಿಕೆಗಳಿವೆ ಎಂದು ಜಿಲ್ಲಾಧಿಕಾರಿ ಗಮನಕ್ಕೆ ಅಧಿಕಾರಿಗಳು ತಂದರು. ಸಭೆಯಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಅಧಿಕಾರಿಗಳು ಭಾಗವಹಿಸಿದ್ದರು.