ಕರ್ನಾಟಕ

karnataka

ETV Bharat / state

ಶಿವರಾತ್ರಿಯಂದು ಶ್ರೀಶೈಲ ಶ್ರೀಗಳಿಂದ ಲಿಂಗ ದೀಕ್ಷೆ ಪಡೆದ ಮುಸ್ಲಿಂ ಯುವಕ! - vijayawada-muslim-young-boy

ಮೂಲತಃ ವಿಜಯವಾಡ ನಿವಾಸಿಯಾದ ಮೊಹಮ್ಮದ್, ಮುಂಬೈ ಮಹಾನಗರದಲ್ಲಿ ಹರ್ಬಲ್ ಉದ್ಯಮ ನಡೆಸುತ್ತಿದ್ದಾನೆ. ಈತ ಮೊದಲಿನಿಂದಲೂ ಶಿವ ಸಂಸ್ಕೃತಿಯ ಬಗ್ಗೆ ವಿಶೇಷ ಶ್ರದ್ಧೆ ಹೊಂದಿದ್ದ. ಶಿವರಾತ್ರಿ ದಿನ ಜಗದ್ಗುರುಗಳು ಪೀಠದಲ್ಲಿರುತ್ತಾರೆ ಎಂದು ತಿಳಿದು ನಿನ್ನೆ ಶ್ರೀಶೈಲಕ್ಕೆ ಬಂದು ದರ್ಶನ ಪಡೆದು ಇಷ್ಟಲಿಂಗವನ್ನು ಪಡೆಯಬೇಕು ಎನ್ನುವ ಬಯಕೆ ವ್ಯಕ್ತಪಡಿಸಿದ್ದಾನೆ. ಬಳಿಕ ಮಾನಸಿಕವಾಗಿ ಸಿದ್ಧನಾಗಿರುವುದಾಗಿ ಹೇಳಿದ ಮೇಲೆ ಜಗದ್ಗುರುಗಳು ಲಿಂಗ ದೀಕ್ಷೆ ನೀಡಿದ್ದಾರೆ.

ಲಿಂಗದೀಕ್ಷೆ
ಲಿಂಗದೀಕ್ಷೆ

By

Published : Mar 12, 2021, 9:00 PM IST

ವಿಜಯಪುರ:ಶಿವ ಸಂಸ್ಕೃತಿಗೆ ಮಾರು ಹೋಗಿ ಶ್ರೀಶೈಲಂ ಜಗದ್ಗುರು ಡಾ. ಚನ್ನ ಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರಿಂದ ಮುಸ್ಲಿಂ ಯುವಕನೊಬ್ಬ ಲಿಂಗ ದೀಕ್ಷೆ ಪಡೆದಿದ್ದಾನೆ.

ಮೊಹಮ್ಮದ್ ಮಸ್ತಾನ್ ಎಂಬ ಇಸ್ಲಾಂ ಯುವಕ ಲಿಂಗ ದೀಕ್ಷೆ ಪಡೆದು ಶ್ರೀಶೈಲ ಮಲ್ಲಿಕಾರ್ಜುನ ದೇವರ ದರ್ಶನ ಪಡೆದನು. ಮೂಲತಃ ವಿಜಯವಾಡ ನಿವಾಸಿಯಾದ ಮೊಹಮ್ಮದ್, ಮುಂಬೈನಲ್ಲಿ ಹರ್ಬಲ್ ಉದ್ಯಮ ನಡೆಸುತ್ತಿದ್ದಾನೆ. ಈತ ಮೊದಲಿನಿಂದಲೂ ಶಿವ ಸಂಸ್ಕೃತಿಯ ಬಗ್ಗೆ ವಿಶೇಷ ಶ್ರದ್ಧೆ ಹೊಂದಿದ್ದ. ಹಲವು ಬಾರಿ ಶ್ರೀಶೈಲಕ್ಕೆ ಬಂದು ಹೋಗಿದ್ದಾನೆ. ಆದರೆ ಈ ಹಿಂದೆ ಶ್ರೀಶೈಲ ಜಗದ್ಗುರುಗಳು ಧರ್ಮ ಪ್ರಚಾರದಲ್ಲಿ ನಿರತರಾಗಿದ್ದ ಕಾರಣ ಈತನಿಗೆ ಜಗದ್ಗುರುಗಳ ದರ್ಶನ ದೊರೆತಿರಲಿಲ್ಲ.

ಶಿವರಾತ್ರಿ ದಿನ ಜಗದ್ಗುರುಗಳು ಪೀಠದಲ್ಲಿರುತ್ತಾರೆ ಎಂದು ತಿಳಿದು ನಿನ್ನೆ ಶ್ರೀಶೈಲಕ್ಕೆ ಬಂದು ದರ್ಶನ ಪಡೆದು ಇಷ್ಟಲಿಂಗವನ್ನು ಪಡೆಯುವ ಬಯಕೆ ವ್ಯಕ್ತಪಡಿಸಿದ್ದಾನೆ. ದೀಕ್ಷೆಯ ನಂತರ ಪಾಲಿಸಬೇಕಾದ ನಿಯಮಗಳನ್ನು ಅನುಸರಿಸಲು ಮೊಹಮ್ಮದ್ ಮಾನಸಿಕವಾಗಿ ಸಿದ್ಧನಾಗಿರುವುದಾಗಿ ತಿಳಿಸಿದ ಮೇಲೆ ಜಗದ್ಗುರುಗಳು ಲಿಂಗ ದೀಕ್ಷೆ ನೀಡಿದ್ದಾರೆ.

ಶ್ರೀಶೈಲ ಶ್ರೀಗಳಿಂದ ಲಿಂಗದೀಕ್ಷೆ ಪಡೆದ ಮುಸ್ಲೀಂ ಯುವಕ

ಮೊದಲು ಪೂರ್ವಾಶ್ರಮ‌ ನಿರಸನಗೊಳಿಸಲು ಅಗರ ಬತ್ತಿಯ ಮೂಲಕ ಜಿಹ್ವಾ ದಹನ, ಅಭಿಷೇಕ ಮಂತ್ರಾದಿಗಳ ಮೂಲಕ ದೇಹ ಶುದ್ಧಿ ಮೊದಲಾದ ವಿಧಿ ವಿಧಾನಗಳನ್ನು ನೆರವೇರಿಸಿ ದೇಹವನ್ನು ಶುದ್ಧಗೊಳಿಸಿ ಲಿಂಗವನ್ನು ನೀಡಿ ಮಂತ್ರೋಪದೇಶ ಮಾಡಿದರು.

ಇಷ್ಟಲಿಂಗವನ್ನು ದೇಹದ ಮೇಲೆ ಸದಾ ಧರಿಸುವಂತೆ, ಪ್ರತಿನಿತ್ಯ ತಪ್ಪದೇ ಅದರ ಪೂಜೆ ನೆರವೇರಿಸುವಂತೆ, ಪೂಜೆ ಮಾಡುವಾಗ ಕನಿಷ್ಠ 108 ಬಾರಿ ಪಂಚಾಕ್ಷರಿ ಮಂತ್ರ ಜಪಿಸುವಂತೆ ಮತ್ತು ಇನ್ನು ಮುಂದೆ ಎಂದೂ ಮಾಂಸಾಹಾರ, ಮದ್ಯ ಸೇವನೆ ಮಾಡದೇ ದುಶ್ಚಟಗಳಿಂದ ದೂರವಿರುವುದಾಗಿ ಪ್ರತಿಜ್ಞಾವಿಧಿ ಬೋಧಿಸಿದರು.

ಲಿಂಗ ದೀಕ್ಷೆ ಪಡೆದ ನಂತರ ಮೊಹಮ್ಮದ್ ವೀರಶೈವ ಲಿಂಗಾಯತ ಧರ್ಮದ ಪಂಚ ಪೀಠಗಳಲ್ಲೊಂದಾದ ಶ್ರೀಶೈಲ ಜಗದ್ಗುರು ಪಂಡಿತಾರಾಧ್ಯ ಮಹಾ ಪೀಠದ ಮತ್ತು ಮಲ್ಲಿಕಾರ್ಜುನ ಜೋತಿರ್ಲಿಂಗ ಹಾಗೂ ಭ್ರಮರಾಂಭ ದೇವಿಯ ದರ್ಶನ ಪಡೆದಿದ್ದಾನೆ.

ABOUT THE AUTHOR

...view details