ಕರ್ನಾಟಕ

karnataka

By

Published : Feb 24, 2021, 8:39 PM IST

ETV Bharat / state

ಭೈರಗೊಂಡ ಮೇಲೆ ಶೂಟೌಟ್ ಪ್ರಕರಣ: ಆರೋಪಿಗಳು ಕೋರ್ಟ್​ಗೆ ಹಾಜರಾಗುವ ವಿಡಿಯೋ ವೈರಲ್

ಭೀಮಾ ತೀರದ ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ಶೂಟೌಟ್ ಕೇಸ್​ ಆರೋಪಿಗಳನ್ನು ಕೋರ್ಟ್​ಗೆ ಹಾಜರು ಪಡಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

viral-video
ಆರೋಪಿಗಳು ಕೋರ್ಟ್​ಗೆ ಹಾಜರಾಗುವ ವಿಡಿಯೋ ವೈರಲ್

ವಿಜಯಪುರ: ಭೀಮಾ ತೀರದ ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ಶೂಟೌಟ್ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರೋಪಿಗಳು ಕೋರ್ಟ್​ಗೆ ಹಾಜರಾಗುವ ವಿಡಿಯೋ ವೈರಲ್

ಜಿಲ್ಲೆಯ ಕನ್ನಾಳ ಕ್ರಾಸ್ ಬಳಿ 2020ರ ನವೆಂಬರ್ 2ರಂದು ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ಗುಂಡಿನ ದಾಳಿ ನಡೆದಿತ್ತು.‌ ಘಟನೆಯಲ್ಲಿ ಕಾರು ಚಾಲಕ ಹಾಗೂ ಗನ್​ಮ್ಯಾನ್ ಮೃತಪಟ್ಟಿದ್ದರು. ಶೂಟೌಟ್ ಆರೋಪಿಗಳು ಕೋರ್ಟ್​ಗೆ ಹಾಜರಾದ ವಿಡಿಯೋ ಈಗ ವೈರಲ್ ಆಗಿದೆ.

ಪ್ರಮುಖ ಆರೋಪಿ ಮಡಿವಾಳಯ್ಯ ಹಿರೇಮಠ ಸೇರಿದಂತೆ ಇತರೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದ ವಿಡಿಯೋ ಇದಾಗಿದೆ. ವಿಜಯಪುರ ನ್ಯಾಯಾಲಯಕ್ಕೆ ಪ್ರಕರಣದ 34 ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಈ ವಿಡಿಯೋ ಹರಿದಾಡುತ್ತಿದೆ.

ABOUT THE AUTHOR

...view details