ವಿಜಯಪುರ :ಕೃಷಿ ಮಸೂದೆ ರದ್ದುಗೊಳಿಸಬೇಕೆಂದು ಆಗ್ರಹಿಸಿ ರೈತರು, ವಿವಿಧ ಪ್ರಗತಿ ಪರ ಹೋರಾಟಗಾರರು ನಡೆಸುತ್ತಿರುವ ಬೃಹತ್ ಪ್ರತಿಭಟನೆ ದಾರಿತಪ್ಪಿದಂತೆ ಕಾಣುತ್ತಿದೆ ಎಂದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ರೈತರ ಹೋರಾಟ ದಾರಿತಪ್ಪಿದಂತೆ ಕಾಣುತ್ತಿದೆ : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ - Vishva Prasanna Theertha Swamiji statement about farmers protest
ನಮ್ಮ ಸಂಸ್ಕ್ರತಿಯ ಪುನರುತ್ಥಾನಕ್ಕೆ ಎಲ್ಲ ಭಾರತೀಯರು ಶ್ರಮಿಸುತ್ತಿದ್ದಾರೆ. ಅಯೋಧ್ಯೆಯಲ್ಲಿ ಭವ್ಯ ಹಿಂದೂಗಳ ಪ್ರತೀಕವಾದ ಮಂದಿರ ನಿರ್ಮಾಣಕ್ಕೆ ಅಪಾರ ಪ್ರಮಾಣದಲ್ಲಿ ದೇಣಿಗೆ ನೀಡುತ್ತಿದ್ದಾರೆ..
![ರೈತರ ಹೋರಾಟ ದಾರಿತಪ್ಪಿದಂತೆ ಕಾಣುತ್ತಿದೆ : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ Vishva Prasanna Theertha Swamiji statement about farmers protest](https://etvbharatimages.akamaized.net/etvbharat/prod-images/768-512-10526580-159-10526580-1612619906669.jpg)
ವಿಜಯಪುರದಲ್ಲಿ ಮಾತನಾಡಿದ ಅವರು, ಕೆಂಪುಕೋಟೆ ಮೇಲಿದ್ದ ದೇಶದ ಧ್ವಜವನ್ನು ಕಿತ್ತು ಹಾಕುವುದು, ಧ್ವಜಕ್ಕೆ ಅವಮಾನ ಮಾಡುವುದು, ಕೇಂದ್ರ ಸರ್ಕಾರದ ವಿರುದ್ಧ ನಿರಂತರವಾಗಿ ಮಾತನಾಡುವುದು, ಗಲಾಟೆ ಮಾಡುವುದನ್ನು ನೋಡಿದರೆ ರೈತರ ಹೋರಾಟ ಏಕೋ ದಿಕ್ಕು ತಪ್ಪಿದಂತಿದೆ. ಈ ರೀತಿ ಹೋರಾಟ ಎಷ್ಟು ಸರಿ ಎಂದು ಪ್ರಶ್ನಿಸಿದರು.
ರಾಮ ಮಂದಿರಕ್ಕೆ ದೇಣಿಗೆ:ಹಿಂದೂಗಳ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಶದ ಜನ ಅಪಾರ ದೇಣಿಗೆ ನೀಡುತ್ತಿದ್ದಾರೆ. ನಮ್ಮ ಸಂಸ್ಕ್ರತಿಯ ಪುನರುತ್ಥಾನಕ್ಕೆ ಎಲ್ಲ ಭಾರತೀಯರು ಶ್ರಮಿಸುತ್ತಿದ್ದಾರೆ. ಅಯೋಧ್ಯೆಯಲ್ಲಿ ಭವ್ಯ ಹಿಂದೂಗಳ ಪ್ರತೀಕವಾದ ಮಂದಿರ ನಿರ್ಮಾಣಕ್ಕೆ ಅಪಾರ ಪ್ರಮಾಣದಲ್ಲಿ ದೇಣಿಗೆ ನೀಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.