ಕರ್ನಾಟಕ

karnataka

ETV Bharat / state

ವಿಶ್ವ ಜನಸಂಖ್ಯಾ ದಿನಾಚರಣೆ: ಚಿಕ್ಕ ವಯಸ್ಸಿಗೆ ಮದುವೆ ಶಿಕ್ಷಾರ್ಹ ಅಪರಾಧ - ಮುದ್ದೇಬಿಹಾಳದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಮುದ್ದೇಬಿಹಾಳ ಪಟ್ಟಣದ ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ರಾಜೇಶ್ವರಿ ಗೋಲಗೇರಿ ಚಾಲನೆ ನೀಡಿದರು.

World Population Day
ಮುದ್ದೇಬಿಹಾಳದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

By

Published : Jul 11, 2020, 11:46 PM IST

ಮುದ್ದೇಬಿಹಾಳ: ಕಾನೂನು ಕ್ರಮಕ್ಕೆ ವಿರೋಧವಾಗಿ ಚಿಕ್ಕ ವಯಸ್ಸಿಗೆ ಮದುವೆ ಮಾಡಿದರೆ ಶಿಕ್ಷಾರ್ಹ ಅಪರಾಧವಾಗಿದ್ದು, ಅಂಥವರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ರಾಜೇಶ್ವರಿ ಗೋಲಗೇರಿ ಹೇಳಿದರು.

ಪಟ್ಟಣದ ತಾಲೂಕಾ ಆರೋಗ್ಯ ಇಲಾಖೆಯ ಕಚೇರಿಯ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜನಸಂಖ್ಯಾ ಹೆಚ್ಚಳದಿಂದ ದೇಶದಲ್ಲಿ ಆರ್ಥಿಕ ಮಾತ್ರವಲ್ಲದೇ ವಿವಿಧ ಸಂಕಷ್ಟಗಳು ಎದುರಾಗುತ್ತವೆ. ಇಲಾಖೆಯು ಜನಸಂಖ್ಯಾ ನಿಯಂತ್ರಣ ವಿಧಾನಗಳನ್ನು ಹೊರತಂದಿದೆ. ಇದಕ್ಕಾಗಿ ಸರ್ಕಾರದಿಂದ ಆರೋಗ್ಯ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಂದ ಸಾಕಷ್ಟು ಜನಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ಜಾಗೃತಿಗೊಳ್ಳುವುದು ಅವಶ್ಯಕವಾಗಿದೆ ಎಂದರು.

ಡಾ.ಜೈಬೀನಿಸಾ ಬೀಳಗಿ ಮಾತನಾಡಿ, ಕೋವಿಡ್-19 ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ತಾತ್ಕಾಲಿಕ ವಿಧಾನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಈ ಸಮಯದಲ್ಲಿ ತಮ್ಮ ಜೀವನವನ್ನು ಒತ್ತೆ ಇಟ್ಟು ಸಾರ್ವಜನಿಕರ ಜೀವರಕ್ಷಣೆಯಲ್ಲಿ ತೊಡಗಿರುವ ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರ ಸೇವೆ ನಿಜಕ್ಕೂ ಮೆಚ್ಚುವಂತಹದು ಎಂದು ಹೇಳಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನಸೂಯಾ ತೇರದಾಳ, ನಗರ ಕೋವಿಡ್-19 ಮೇಲ್ವಿಚಾರಕ ಎಂ.ಎಸ್.ಗೌಡರ, ಆಶಾ ಕಾರ್ಯಕರ್ತೆಯರಾದ ಪ್ರತಿಭಾರಾಣಿ, ಉಮಾ ಶಾರದಳ್ಳಿ, ಐ.ಸಿ.ಮಾನಕರ, ಬಿ.ಎಂ.ಗೋಲಭಾವಿ, ಸಿದ್ದನಗೌಡ ಬಿದಗೊಂಡ ಉಪಸ್ಥಿತರಿದ್ದರು.

ABOUT THE AUTHOR

...view details