ಕರ್ನಾಟಕ

karnataka

ETV Bharat / state

ತಲೆಯ ಮೇಲೆ ಕಲ್ಲು ಹಾಕಿ ಯುವತಿಯ ಬರ್ಬರ ಕೊಲೆ... ವಿಜಯಪುರ ಬಳಿ ಭಯಾನಕ ಕೃತ್ಯ - undefined

ಅಪರಿಚಿತ ಯುವತಿಯ ಕೊಲೆ ಪ್ರಕರಣ ವಿಜಯಪುರ ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿದೆ. ಯುವತಿ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ, ನಂತರ ಗುರುತು ಸಿಗದಂತೆ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ ದುಷ್ಕರ್ಮಿಗಳು.

ಯುವತಿಯ ಬರ್ಬರ ಹತ್ಯೆ

By

Published : May 10, 2019, 12:20 PM IST

ವಿಜಯಪುರ:ತಾಲೂಕಿನ ಹಿಟ್ನಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸೇತುವೆ ಕೆಳಗೆಭೀಕರವಾಗಿ ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ಯುವತಿವೋರ್ವಳ ಶವ ಪತ್ತೆಯಾಗಿದೆ.

ಸುಮಾರು 25 ರಿಂದ 28 ವರ್ಷ ವಯಸ್ಸಿನ ಈ ಯುವತಿ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ ನಂತರ ಆಕೆಯ ಗುರುತು ಸಿಗದಂತೆ ದುಷ್ಕರ್ಮಿಗಳು ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಭೀಕರ ಕೊಲೆಯಿಂದ ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದಾರೆ.

ಸ್ಥಳಕ್ಕೆ ವಿಜಯಪುರ ‌ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಯುವತಿಯ ಗುರುತು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details