ಕರ್ನಾಟಕ

karnataka

ETV Bharat / state

ಭೀಕರ ರಸ್ತೆ ಅಪಘಾತ: ಬಸ್ಸೇ ಈ ರೀತಿ ನಜ್ಜುಗುಜ್ಜಾದ್ರೆ ಇನ್ನು ಪ್ರಯಾಣಿಕರ ಸ್ಥಿತಿ..!

ಭೀಕರ ರಸ್ತೆ ಅಪಘಾತದ ಸಂಭವಿಸಿದ್ದು 10 ಜನರು ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

By

Published : Feb 13, 2020, 1:26 PM IST

10 person injured, 10 person injured in road accident, 10 person injured in road accident at Yadagiri, Yadagiri road accident news, 10 ಜನರಿಗೆ ಗಾಯ, ಯಾದಗಿರಿ ರಸ್ತೆ ಅಪಘಾತದಲ್ಲಿ 10 ಜನರಿಗೆ ಗಾಯ, ಯಾದಗಿರಿ ರಸ್ತೆ ಅಪಘಾತ ಸುದ್ದಿ,
ಭೀಕರ ರಸ್ತೆ ಅಪಘಾತ

ಯಾದಗಿರಿ: ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರ್ಘಟನೆ ಶಹಪುರ ತಾಲ್ಲೂಕಿನ ಭೀಮರಾಯನ ಗುಡಿ ಬಳಿ ನಡೆದಿದೆ.

ರಸ್ತೆ ಅಪಘಾತದಲ್ಲಿ ನಜ್ಜುಗುಜ್ಜಾದ ಬಸ್‌

ಸಾರಿಗೆ ಬಸ್​ನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ಘಟನೆಯಲ್ಲಿ 10 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಶಹಪುರ ತಾಲ್ಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಭೀಕರ ರಸ್ತೆ ಅಪಘಾತದ ಚಿತ್ರಣ

ಅಪಘಾತ ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಬಸ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಚಾಲಕನ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೀಮರಾಯ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ರಸ್ತೆ ಅಪಘಾತದ ಚಿತ್ರಣ

ABOUT THE AUTHOR

...view details