ಕರ್ನಾಟಕ

karnataka

ETV Bharat / state

ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿ ಡಿಕ್ಕಿ...ಪಾರಾದ ಬಿಜೆಪಿ ಮುಖಂಡ ಶಶೀಲ್ ನಮೋಷಿ - traffic accident

ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದವರು ಅದೃಷ್ಟಾವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

bjp leader met the an accident at yadagiri

By

Published : Nov 9, 2019, 5:55 PM IST

ಯಾದಗಿರಿ:ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಶಶೀಲ್ ನಮೋಷಿ ಸೇರಿದಂತೆ ಇನ್ನಿಬ್ಬರು ಅದೃಷ್ಟಾವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಬಳಿ ಈ ಘಟನೆ ಕಳೆದ ರಾತ್ರಿ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹೊಲಕ್ಕೆ ನುಗ್ಗಿ ಸಂಪೂರ್ಣ ಜಖಂಗೊಂಡಿದೆ.

ಲಾರಿಗೆ ಡಿಕ್ಕಿ ಹೊಡೆದಿರುವುದು

ಸುರಪುರದಿಂದ ಕಲಬುರಗಿ ನಗರದತ್ತ ಶಶೀಲ ನಮೋಶಿ ಕಾರಿನಲ್ಲಿ ಹೊರಟಿದ್ದರು. ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿದಾಗ ಈ ಅಪಘಾತ ಸಂಭವಿಸಿದೆ. ಶಹಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details