ಕರ್ನಾಟಕ

karnataka

By

Published : Jun 22, 2020, 5:35 PM IST

ETV Bharat / state

ಸುರಪುರ: ಬಾಲಕಾರ್ಮಿಕ ಪದ್ಧತಿ, ಕೊರೊನಾ ವೈರಸ್ ಕುರಿತು ಜನಜಾಗೃತಿ ಜಾಥಾ

ಎರಡು ದಿನಗಳ ಕಾಲ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಆಯ್ದ ಪ್ರದೇಶಗಳಲ್ಲಿ ನಡೆಯುವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಹಾಗೂ ಕೊರೊನಾ ವೈರಸ್ ಕುರಿತು ಜನಜಾಗೃತಿ ಜಾಥಾಗೆ, ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ತೊಯ್ಯಬಾ ಸುಲ್ತಾನ್ ಹಸಿರು ನಿಶಾನೆ ತೋರಿಸಿದರು.

child labour policy and corona virus awarness in surapura
ಸುರಪುರ: ಬಾಲಕಾರ್ಮಿಕ ಪದ್ಧತಿ, ಕೊರೊನಾ ವೈರಸ್ ಕುರಿತು ಜನಜಾಗೃತಿ ಜಾಥಾ

ಸುರಪುರ (ಯಾದಗಿರಿ):ತಾಲೂಕಿನಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಹಾಗೂ ಕೊರೊನಾ ವೈರಸ್ ಕುರಿತು ಜನಜಾಗೃತಿ ಜಾಥಾ ನಡೆಸಲಾಯಿತು.

ಸುರಪುರ: ಬಾಲಕಾರ್ಮಿಕ ಪದ್ಧತಿ, ಕೊರೊನಾ ವೈರಸ್ ಕುರಿತು ಜನಜಾಗೃತಿ ಜಾಥಾ

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನಾ ಯೋಜನಾ ಸಮಿತಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬಾಲ ಕಲ್ಯಾಣ ಸಮಿತಿ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಕೊರೊನಾ ವೈರಸ್ ಕುರಿತು ಜನಜಾಗೃತಿ ಪ್ರಚಾರಾಂದೋಲನ ಜಾಥಾ ಹಮ್ಮಿಕೊಳ್ಳಲಾಗಿದೆ.

ಎರಡು ದಿನಗಳ ಕಾಲ ಸುರಪುರ ತಾಲೂಕಿನ ಆಯ್ದ ಪ್ರದೇಶಗಳಲ್ಲಿ ನಡೆಯುವ ಜಾಥಾಗೆ, ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ತೊಯ್ಯಬಾ ಸುಲ್ತಾನ್ ಹಸಿರು ನಿಶಾನೆ ತೋರಿಸಿದರು.

ABOUT THE AUTHOR

...view details