ಯಾದಗಿರಿ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನ ಕೊಂದ ನಾಥುರಾಮ ಗೋಡ್ಸೆಯನ್ನು ಬಿಜೆಪಿ ನಾಯಕ ಹಾಗೂ ಸಂಸದ ಮಹಾನ್ ದೇಶಭಕ್ತ ಎಂದು ಹೇಳಿರುವ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನೆ ಪ್ರಾರಂಭಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಾದ್ವಿ ಪ್ರಗ್ಯಾ ಸಿಂಗ್, ನಾಥುರಾಮ ಗೋಡ್ಸೆ ಮಹಾನ್ ದೇಶಭಕ್ತ ಎಂದು ಹೇಳಿಕೆ ನೀಡಿದರ ವಿರುದ್ದ ಹರಿಹಾಯ್ದ ಪ್ರತಿಭಟನಾಕಾರರು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು.