ಕರ್ನಾಟಕ

karnataka

By

Published : Apr 6, 2020, 6:42 PM IST

ETV Bharat / state

ಮನೆಯಿಂದ ಹೊರಬರಲಾಗದವರ ಬಾಗಿಲಿಗೆ ಆಹಾರ ಧಾನ್ಯ ವಿತರಣೆ

ಕೊರೊನಾ ಭೀತಿಯಿಂದ ದೇಶದಾದ್ಯಂತ ಲಾಕ್​ಡೌನ್ ನಿಯಮ ಜಾರಿ ಮಾಡಲಾಗಿದೆ. ಈ ಹಿನ್ನೆಲೆ ಜನ ಮನೆಯಿಂದ ಹೊರಬರಲಾಗದ ಸ್ಥಿತಿ ಇದೆ. ಈ ಹಿನ್ನೆಲೆ ಅಗತ್ಯವಿರುವವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಪೂರೈಕೆ ಮಾಡಲಾಗಿದೆ. ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದಿಂದ ಆಹಾರ ಧಾನ್ಯಗಳು ಮತ್ತು ತರಕಾರಿ ವಿತರಿಸಲಾಗುತ್ತಿದೆ. ಮನೆಯಿಂದ ಹೊರಬರಲಾಗದ ಪರಿಸ್ಥಿತಿಯಲ್ಲಿರುವವರಿಗೆ ಉಚಿತವಾಗಿ ಅಗತ್ಯವಿರುವ ಆಹಾರ ಧಾನ್ಯಗಳನ್ನು ವಿತರಿಸಲಾಗಿದೆ. ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವೆಂಕೋಬ ದೊರೆ ನೇತೃತ್ವದಲ್ಲಿ ಆಹಾರ ಧಾನ್ಯ ವಿತರಿಸಲಾಗಿದೆ.

Corona: Food grain distribution to the door of the poor
ಕೊರೊನಾ: ಮನೆಯಿಂದ ಹೊರಬರಲಾಗದವರ ಬಾಗಿಲಿಗೆ ಆಹಾರ ಧಾನ್ಯ ವಿತರಣೆ

ಸುರಪುರ (ಯಾದಗಿರಿ): ಕೊರೊನಾ ಹರಡುವ ಭೀತಿಯಲ್ಲಿ ಲಾಕ್​ಡೌನ್​ ಆದೇಶ ಜಾರಿ ಮಾಡಲಾಗಿದೆ. ಇದರಿಂದ ಮನೆಯಿಂದ ಯಾರೂ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಜೀವನ ನಡೆಸಲು ತೊಂದರೆಯುಂಟಾಗಿದೆ. ಈ ಹಿನ್ನೆಲೆ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದಿಂದ ಆಹಾರ ಧಾನ್ಯಗಳು ಮತ್ತು ತರಕಾರಿ ವಿತರಿಸಲಾಗುತ್ತಿದೆ.

ಕೊರೊನಾ: ಮನೆಯಿಂದ ಹೊರಬರಲಾಗದವರ ಬಾಗಿಲಿಗೆ ಆಹಾರ ಧಾನ್ಯ ವಿತರಣೆ

ಮನೆಯಿಂದ ಹೊರಬರಲಾಗದ ಪರಿಸ್ಥಿತಿಯಲ್ಲಿರುವವರಿಗೆ ಉಚಿತವಾಗಿ ಅಗತ್ಯವಿರುವ ಆಹಾರ ಧಾನ್ಯಗಳನ್ನು ವಿತರಿಸಲಾಗಿದೆ. ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವೆಂಕೋಬ ದೊರೆ ನೇತೃತ್ವದಲ್ಲಿ ಆಹಾರ ಧಾನ್ಯ ವಿತರಿಸಲಾಗಿದೆ.

ABOUT THE AUTHOR

...view details