ಯಾದಗಿರಿ: ಯಾದಗಿರಿ ಮತಕ್ಷೇತ್ರದ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟ ಕಾರಣ ವೆಂಕಟರೆಡ್ಡಿ ಮುದ್ನಾಳ ಅವರು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಶಾಸಕ ವೆಂಕಟರೆಡ್ಡಿ ಮುದ್ನಾಳ, ಬೆಳಗ್ಗೆ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದರು. ಶಾಸಕರ ಕೋವಿಡ್ ವರದಿ ಪಾಸಿಟಿವ್ ಬಂದಿದ್ದು ಚಿಕಿತ್ಸೆಗಾಗಿ ಮುದ್ನಾಳ ಬೆಂಗಳೂರಿಗೆ ತೆರಳಿ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.