ಯಾದಗಿರಿ:ತೀವ್ರ ಕೆಮ್ಮು, ನೆಗಡಿ, ಜ್ವರ ಮತ್ತು ಗಂಟಲು ನೋವಿನಿಂದ ಆರು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದು, ಕೊರೊನಾ ಶಂಕೆಯಿಂದಾಗಿ ಬಾಲಕಿಯ ಗಂಟಲು ದ್ರವ ಮತ್ತು ರಕ್ತದ ಮಾದರಿಯನ್ನ ಪರೀಕ್ಷೆಗಾಗಿ ಕಲಬುರಗಿಗೆ ರವಾನಿಸಲಾಗಿದೆ.
ಜಿಲ್ಲೆಯ ಶಹಾಪುರ ತಾಲೂಕಿನ ಕೊಂಗಂಡಿ ಗ್ರಾಮದ ಬಾಲಕಿ ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಏಪ್ರಿಲ್ 1ರಂದು ಬೆಂಗಳೂರಿನಿಂದ ಮೃತ ಬಾಲಕಿ ಕುಟುಂಬ ಕೊಂಡಳ್ಳಿ ಗ್ರಾಮಕ್ಕೆ ಬಂದಿತ್ತು. ಬಾಲಕಿ ಅನಾರೋಗ್ಯದಿಂದ ಬಳಲಿತ್ತಿದ್ದು, ಸ್ಥಳೀಯ ಖಾಸಗಿ ವೈದ್ಯರ ಬಳಿ ಚಿಕಿತ್ಸೆ ಪಡೆಯಲಾಗುತ್ತಿತ್ತು.