ಕರ್ನಾಟಕ

karnataka

By

Published : Aug 31, 2020, 12:43 PM IST

ETV Bharat / state

ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಮೂರು ಎಕರೆ ಜಮೀನಿನಲ್ಲಿ ರೈತ ಮಂಜೂರ ಹತ್ತಿ ಬೆಳೆ ಬೆಳೆದಿದ್ದ, ಕೃಷ್ಣಾ ನದಿ ಪ್ರವಾಹಕ್ಕೆ ಈ ರೈತ ಬೆಳೆದ ಬೆಳೆ ಸಂಪೂರ್ಣ ಜಲಾವೃತಗೊಂಡ ಹಿನ್ನೆಲೆ ಮನನೊಂದು ಕ್ರಿಮಿನಾಶಕ ಸೇವಿಸಿದ್ದ.

ಸಾಲ ಬಾದೆ ತಾಳಲಾರದೆ ರೈತನೊರ್ವ ವಿಷ ಸೆವಿಸಿ ಆತ್ಮಹತ್ಯೆ
ಸಾಲ ಬಾದೆ ತಾಳಲಾರದೆ ರೈತನೊರ್ವ ವಿಷ ಸೆವಿಸಿ ಆತ್ಮಹತ್ಯೆ

ಯಾದಗಿರಿ: ಸಾಲ ಬಾಧೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಗೋಂದನೂರು ಗ್ರಾಮದಲ್ಲಿ ನಡೆದಿದೆ.

ಮಂಜೂರ ತಂದೆ ಹುಸೇನ್ ಸಾಬ್ ಎಂಬುವಾತನೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಮೂರು ಎಕರೆ ಜಮೀನಿನಲ್ಲಿ ರೈತ ಮಂಜೂರ ಹತ್ತಿ ಬೆಳೆ ಬೆಳೆದಿದ್ದ. ಕೃಷ್ಣಾ ನದಿ ಪ್ರವಾಹಕ್ಕೆ ಈ ರೈತ ಬೆಳೆದ ಬೆಳೆ ಸಂಪೂರ್ಣ ಜಲಾವೃತಗೊಂಡ ಹಿನ್ನೆಲೆ ಮನನೊಂದು ಕ್ರಿಮಿನಾಶಕ ಸೇವಿಸಿದ್ದ.

ವಿಷಯ ತಿಳಿದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ರೈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಪ್ರಾಥಮಿಕ ಚಿಕಿತ್ಸೆ ನೀಡಿದ ಜಿಲ್ಲಾಸ್ಪತ್ರೆಯ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದರು. ರಾಯಚೂರು ರಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ರೈತ ಮಂಜೂರ ಕಳೆದ ರಾತ್ರಿ ಸಾವನ್ನಪ್ಪಿದ್ದಾನೆ.

ಡಿಸಿಸಿ ಬ್ಯಾಂಕ್​ನಲ್ಲಿ 30 ಸಾವಿರ ಸೇರಿದಂತೆ ಖಾಸಗಿಯಾಗಿ 50 ಸಾವಿರ ರೂ. ಸಾಲ ಮಾಡಿಕೊಂಡಿದ್ದ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ವಡಗೇರಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details