ಕರ್ನಾಟಕ

karnataka

By

Published : Jul 19, 2019, 4:57 AM IST

ETV Bharat / state

ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲ ಪಡೆದು ತೀರಿಸಲಾಗದೆ ರೈತನೋರ್ವ ಯಾದಗಿರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೈತ ಆತ್ಮಹತ್ಯೆ.

ಯಾದಗಿರಿ :ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡರ ಗ್ರಾಮದಲ್ಲಿ ನಡೆದಿದೆ.

ಈರಪ್ಪ ಕನಕಗಿರಿ( 49) ಆತ್ಮಹತ್ಯೆ ಮಾಡಿಕೊಂಡ ರೈತ. ಖಾಸಗಿ ಹಾಗೂ ಸರಕಾರಿ ಬ್ಯಾಂಕಿನಿಂದ ಸಾಲವನ್ನು ಪಡೆದುಕೊಂಡಿದ್ದ ಈರಪ್ಪ ಸಾಲ ತೀರಿಸಲಾಗದೆ ಮನೆಯಲ್ಲಿ ವಿಷವನ್ನು ಸೇವಿಸಿದ್ದಾನೆಂದು ಪೊಲೀಸರು ಶಂಕಿಸಿದ್ದಾರೆ.

ವಿಷ ಸೇವಿಸಿ ರೈತ ಆತ್ಮಹತ್ಯೆ

ಸದ್ಯ ಈ ಪ್ರಕರಣ ಶಹಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ABOUT THE AUTHOR

...view details