ಕರ್ನಾಟಕ

karnataka

ETV Bharat / state

ಗುರುಮಠಕಲ್​: ಸಾರ್ವಜನಿಕರಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಿದ ಪೊಲೀಸರು

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಬಸ್ ನಿಲ್ದಾಣ, ಮಾರುಕಟ್ಟೆಯ ಜನನಿಬಿಡ ಸ್ಥಳಗಳಲ್ಲಿ ಗುರುಮಠಕಲ್ ಸಿಪಿಐ ದೇವಿಂದ್ರಪ್ಪ ಧೂಳಖೇಡ ಮೈಕ್​ ಮೂಲಕ ಕೊರೊನಾ ಕುರಿತು ಜಾಗೃತಿ ಮೂಡಿಸಿದರು.

By

Published : Jul 8, 2020, 5:14 PM IST

Gurumathakkal: cops have made Corona aware of the public
ಗುರುಮಠಕಲ್​: ಸಾರ್ವಜನಿಕರಲ್ಲಿ ಕೊರೊನಾ ಜಾಗೃತಿ ಮೂಡಿಸಿದ ಪೊಲೀಸರು

ಗುರುಮಠಕಲ್​ (ಯಾದಗಿರಿ): ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗ್ತಿರುವ ಹಿನ್ನೆಲೆ ಗುರುಮಠಕಲ್ ಪಟ್ಟಣದಲ್ಲಿ ಪೊಲೀಸರು ಜನ ಜಾಗೃತಿ ಮೂಡಿಸಿದ್ರು‌.

ಗುರುಮಠಕಲ್​: ಸಾರ್ವಜನಿಕರಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಿದ ಪೊಲೀಸರು

ಪಟ್ಟಣದ ಬಸ್ ನಿಲ್ದಾಣ, ಮಾರುಕಟ್ಟೆಯ ಜನನಿಬಿಡ ಸ್ಥಳಗಳಲ್ಲಿ ಗುರುಮಠಕಲ್ ಸಿಪಿಐ ದೇವಿಂದ್ರಪ್ಪ ಧೂಳಖೇಡ ಮೈಕ್​ ಮೂಲಕ ಕೊರೊನಾ ಜಾಗೃತಿ ಮೂಡಿಸಿದರು. ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 1,016ಕ್ಕೆ ಏರಿಕೆಯಾಗಿದೆ. ಹೀಗಾಗಿ ಜನರು ಸುಖಾಸುಮ್ಮನೆ ಓಡಾಟ ನಡೆಸದಂತೆ ಸೂಚಿಸಿದರು.

ಉದ್ಯೋಗ, ವ್ಯಾಪಾರ ವಹಿವಾಟುವಿಗೆ ತೆರಳುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿಬೇಕು. ಆಗಾಗ ಸಾನಿಟೈಸ್​ ಮಾಡಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕೆಮ್ಮುವಾಗ, ಸೀನುವಾಗ ಬಾಯಿಗೆ ಬಟ್ಟೆ ಮುಚ್ಚಿಕೊಳ್ಳಬೇಕು ಎಂದು ಜಾಗೃತಿ ಮೂಡಿಸಿದರು.

ABOUT THE AUTHOR

...view details