ಯಾದಗಿರಿ: ರಾಜ್ಯ ರೈತ ಸಂಘ ಇನ್ನು ಮುಂದೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ಪುಂಡ ಪೋಕರಿಗಳು ಶಾಸಕರಾಗಿ ವಿಧಾನಸಭೆಗೆ ಹೋಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರೈತರು ಸಹ ವಿಧಾನಸಭೆ ಪ್ರವೇಶಿಸಬೇಕೆನ್ನುವ ಮಹತ್ವಾಕಾಂಕ್ಷೆ ಇದೆ ಎಂದರು.
ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತ ಸಂಘದಿಂದ ಮುಂದಿನ ದಿನಗಳಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ರೈತರು ಕಣಕ್ಕಿಳಿಯುತ್ತಿದ್ದಾರೆ. ವ್ಯವಸ್ಥೆಯನ್ನು ಸರಿಪಡಿಸಲು ರೈತರೂ ಕೂಡ ವಿಧಾನಸೌಧಕ್ಕೆ ಹೋಗಬೇಕಾಗಿದೆ ಎಂದರು.