ಕರ್ನಾಟಕ

karnataka

By

Published : Jun 11, 2019, 10:47 PM IST

ETV Bharat / state

ಕುಮಾರಸ್ವಾಮಿ ಪಂಚತಾರಾ ಹೋಟೆಲ್​ಗಳಲ್ಲಿಯೇ ಕಾಲ ಕಳೆದಿದ್ದಾರೆ: ಬಿಎಸ್​ವೈ

ದೋಸ್ತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಕುಮಾರಸ್ವಾಮಿ ಪಂಚತಾರಾ ಹೋಟೆಲ್​ಗಳಲ್ಲಿ ವಾಸ್ತವ್ಯ ಮಾಡುವ ಮೂಲಕ ಕಾಲ ಕಳೆದಿದ್ದಾರೆ ಎಂದು ಆರೋಪಿದರು.

ದೋಸ್ತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ

ಯಾದಗಿರಿ:ಜಿಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದು, ಜಾನುವಾರಗಳು ಕಸಾಯಿಖಾನೆಗೆ ತೆರಳುತ್ತಿವೆ. ಇದನ್ನು ನೋಡಿಯೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.

ಬರ ಪರಿಶೀಲನೆಗೆಂದು ಜಿಲ್ಲೆಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಭೀಕರ ಬರಗಾಲ ಆವರಿಸಿದೆ. ಗೋಶಾಲೆಗಳನ್ನು ತೆರೆಯದಿರುವ ಹಿನ್ನೆಲೆ ಜಾನುವಾರುಗಳು ಅಸುನೀಗುತ್ತಿವೆ. ಅಕ್ರಮವಾಗಿ ಜಾನುವಾರಗಳು ಕಸಾಯಿಖಾನೆಗೆ ಹೋಗುತ್ತಿದ್ದರು ಸರ್ಕಾರ ಮಾತ್ರ ಕಣ್ಣುಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು.

ದೋಸ್ತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಯಡಿಯೂರಪ್ಪ

ಕುಮಾರಸ್ವಾಮಿ ಅಧಿಕಾರ ಬಂದ ದಿನದಿಂದಲೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಬರೀ ಪಂಚತಾರಾ ಹೋಟೆಲ್​ಗಳಲ್ಲಿ ವಾಸ್ತವ್ಯ ಮಾಡುವ ಮೂಲಕ ಕಾಲ ಕಳೆದಿದ್ದಾರೆ. ಈಗ ಮಾತ್ರ ಗ್ರಾಮ ವಾಸ್ತವ್ಯ ಮಾಡುವ ಮುಖಾಂತರ ಜನರ ಕಣ್ಣಿಗೆ ಮಣ್ಣು ಎರಚುವ ಕೆಲಸ ಮಾಡುತ್ತಿದ್ದಾರೆ ಎಂದು ಗುಡುಗಿದರು.

ಜಿಂದಾಲ್​ ಕಂಪನಿಯಿಂದ ಮೈತ್ರಿ ಸರ್ಕಾರ ಕೋಟ್ಯಂತರ ರೂ. ಕಿಕ್​ಬ್ಯಾಕ್​ ಪಡೆದುಕೊಂಡಿದ್ದು, ಕೇವಲ ಒಂದು ಲಕ್ಷ ರೂ. ಹಣಕ್ಕೆ ಜಮೀನನ್ನು ಮಾರಾಟ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ABOUT THE AUTHOR

...view details