ಯಾದಗಿರಿ: ಕೃಷ್ಣಾ ನದಿಯ ದಡದಲ್ಲಿ ಬುಧವಾರ ಸೌದೆ ತರಲು ಹೋಗಿದ್ದ ತಾಲೂಕಿನ ಕೊಂಕಲ್ ಗ್ರಾಮದ ವ್ಯಕ್ತಿ ಮೊಸಳೆ ದಾಳಿಗೆ ಒಳಗಾಗಿದ್ದು, ಗುರುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ.
ರಾತ್ರಿ ವೇಳೆಯಲ್ಲಿ ಮೀನುಗಾರರು ಶವಕ್ಕಾಗಿ ಶೋಧ ಕಾರ್ಯ ನಡೆಸಿದ್ದರೂ ದೇಹ ಪತ್ತೆಯಾಗಿರಲಿಲ್ಲ. ಆದರೆ, ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.