ಕರ್ನಾಟಕ

karnataka

ETV Bharat / state

ಸಿಎಎ ವಿರೋಧಿಸಿ ಬೃಹತ್​ ಸಮಾವೇಶ: ಕಾರ್ಯಕ್ರಮದಲ್ಲಿ ಘಟಾನುಘಟಿಗಳು ಭಾಗಿ

ನಗರದ ಶೇಹ್ನಾ ಲೇಔಟ್​ನಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಯಿತು. ಸಾದಾಯೆ ಮಿಲ್ಲತ್ ಕಮಿಟಿ ವತಿಯಿಂದ ಆಯೋಜನೆ ಮಾಡಲಾಗಿದ್ದ ಈ ಸಮಾವೇಶಕ್ಕೆ ಜಿಲ್ಲೆಯ ಮೂಲೆ ಮೂಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದರು.

By

Published : Feb 26, 2020, 7:21 PM IST

Massive convention opposing CAA in Yadagiri
ಸಿಎಎ ವಿರೋಧಿಸಿ ಬೃಹತ್​ ಸಮಾವೇಶ

ಯಾದಗಿರಿ: ಸಿಎಎ, ಎನ್​ಆರ್​ಸಿ ಹಾಗೂ ಎನ್​ಪಿಆರ್ ವಿರೋಧಿಸಿ ನಗರದಲ್ಲಿ ಬೃಹತ್​ ಸಮಾವೇಶ ನಡೆಸಲಾಯಿತು.

ನಗರದ ಶೇಹ್ನಾ ಲೇಔಟ್​ನಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಯಿತು. ಸಾದಾಯೆ ಮಿಲ್ಲತ್ ಕಮಿಟಿಯಿಂದ ಆಯೋಜನೆ ಮಾಡಲಾಗಿದ್ದ ಈ ಸಮಾವೇಶಕ್ಕೆ ಜಿಲ್ಲೆಯ ಮೂಲೆ ಮೂಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದರು.

ಸಿಎಎ ವಿರೋಧಿಸಿ ಬೃಹತ್​ ಸಮಾವೇಶ

ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಖರ್ಗೆ, ಸಿಎಂ ಇಬ್ರಾಹಿಂ, ಶಾಸಕರಾದ ಶರಣಬಸಪ್ಪ ದರ್ಶನಾಪುರ, ಖನೀಜ್ ಫಾತಿಮಾ ಸೇರಿದಂತೆ ಹಲವು ಮಂದಿ ಮುಖಂಡರು ಸಿಎಎ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ದಲಿತ ಮುಖಂಡ ಗುರುಶಾಂತ ಪಟ್ಟೇದ್ದಾರ, ಮೋದಿ ಹಾಗೂ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇವರ ಮಾತಿನ ಘಾಟಿ ಜೋರಾದಂತೆ ಭಾಷಣ ನಿಲ್ಲಿಸಲು ವೇದಿಕೆ ಮೇಲಿದ್ದ ಗಣ್ಯರು ಸಲಹೆ ನೀಡಿದ ಪ್ರಸಂಗವೂ ನಡೆಯಿತು.

ABOUT THE AUTHOR

...view details