ಕರ್ನಾಟಕ

karnataka

ಅಲ್ಪಸಂಖ್ಯಾತ ವಸತಿ ನಿಲಯದಲ್ಲಿ ಸಚಿವ ಪ್ರಭು ಚವ್ಹಾಣ್ ವಾಸ್ತವ್ಯ: ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಗರಂ

By

Published : Jan 3, 2020, 7:48 AM IST

ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಜಿಲ್ಲೆಯ ಬಂದಳ್ಳಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿದ್ದು, ಅವ್ಯವಸ್ಥೆ ಕಂಡು ಸಿಬ್ಬಂದಿಯನ್ನು ತರಾಟೆ ತೆಗೆದುಕೊಂಡಿದ್ದಾರೆ.

ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿದ ಸಚಿವ ಪ್ರಭು ಚವ್ಹಾಣ್
Minister Prabhu Chavan suddenly visited Residential School

ಯಾದಗಿರಿ:ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯವಸತಿ ಶಾಲೆಗೆ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವ್ಯವಸ್ಥೆ ಕಂಡ ಸಚಿವರು ಸಿಬ್ಬಂದಿಗೆ ಬಿಸಿ ಮುಟ್ಟಿಸಿದರು.

ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿದ ಸಚಿವ ಪ್ರಭು ಚವ್ಹಾಣ್

ರಾತ್ರಿ ಸುಮಾರು 8 ಗಂಟೆಗೆವಸತಿ ಶಾಲೆಗೆಸಚಿವರು ಭೇಟಿ ನೀಡಿದ್ದಾರೆ. ಈ ವೇಳೆ ಶಾಲೆಯ ದುಸ್ಥಿತಿ, ಸ್ವಚ್ಚತೆ ಕಂಡು ಸಿಡಿಮಿಡಿಗೊಂಡರು.ವಸತಿ ನಿಯಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ತಕ್ಷಣವೇ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ರು. ಜೊತೆಗೆ ರಾತ್ರಿ ವಸತಿ ಶಾಲೆಯಲ್ಲೇ ಸಚಿವರು ವಾಸ್ತವ್ಯ ಹೂಡಿದರು.

ರಾತ್ರಿ ಶಾಲಾ ಮಕ್ಕಳ ಜೊತೆ ಭೋಜನ ಮಾಡಿದ ಸಚಿವರು, ಉತ್ತಮ ಮಟ್ಟದ ಆಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಸಿಬ್ಬಂದಿ ಹಾಗು ವಿದ್ಯಾರ್ಥಿಗಳ ಹಾಜರಾತಿ ಪುಸ್ತಕ ಪರಿಶೀಲಿಸಿದ್ರು.

ಸಚಿವರ ದಿಢೀರ್‌ ಭೇಟಿ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದ್ದು, ಬಹುದಿನಗಳಿಂದ ಎದುರಿಸುತ್ತಿದ್ದ ವಸತಿನಿಲಯದ ಸಮಸ್ಯೆ ಇನ್ನಾದ್ರೂ ಬಗೆಹರಿಯಲಿ ಅನ್ನೋದು ವಿದ್ಯಾರ್ಥಿಗಳ ಆಶಾವಾದ.

ABOUT THE AUTHOR

...view details