ಯಾದಗಿರಿ:ಹಿಂದೆ ಗುರು ಇರಬೇಕು, ಮುಂದೆ ಗುರಿ ಇರಬೇಕು ಎನ್ನುವ ನಾಣ್ಣುಡಿಯಂತೆ ಪ್ರತಿಯೊಬ್ಬರ ಜೀವನದಲ್ಲಿ ಗುರು ಇದ್ದಾಗ ಮಾತ್ರ ಗುರಿ ಸಾಧಿಸಲು ಸಾಧ್ಯ ಎಂದು ಹೇಳುತ್ತಾರೆ. ಆದ್ರೆ ಇಲೊಬ್ಬ ವಿದ್ಯಾರ್ಥಿನಿ ತಂದೆಯನ್ನೆ ಗುರುವನ್ನಾಗಿ ಸ್ವೀಕರಿಸಿ ಅವರು ಹೇಳಿದ ಹಾದಿಯಲ್ಲಿ, ಮಾರ್ಗದರ್ಶನದಲ್ಲಿ ಬೆಳೆದು ಜಿಲ್ಲೆಗೆ ಒಳ್ಳೆಯ ಹೆಸರು ತಂದಿದ್ದಾರೆ.
ಹೌದು, ಜಿಲ್ಲೆಯ ಪ್ರಿಯದರ್ಶಿನಿ ಎಂಬ ವಿದ್ಯಾರ್ಥಿನಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 593 ಅಂಕಗಳನ್ನು ಪಡೆದು 94.24 ಶೇಕಡಾವಾರು ಫಲಿತಾಂಶವನ್ನು ಪಡೆದು ಹಿಂದುಳಿದ ಜಿಲ್ಲೆಯಲ್ಲಿ ನಾವೂ ಮುಂದೆ ಇದ್ದೇವೆ ಎನ್ನುವುದನ್ನು ತೋರಿಸಿದ್ದಾಳೆ.