ಸುರಪುರ: ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಸುರಪುರ ತಾಲೂಕಿನ ತಿಂಥಣಿ ಬಳಿಯ ಕೃಷ್ಣಾ ನದಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬ್ಯಾರೇಜ್ ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿದರು.
ಬ್ಯಾರೇಜ್ ಕಾಮಗಾರಿ ಸ್ಥಳ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ - Minister ramesh jarakiholi news
ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಸುರಪುರ ತಾಲೂಕಿನ ತಿಂಥಣಿ ಬಳಿಯ ಕೃಷ್ಣಾ ನದಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬ್ಯಾರೇಜ್ ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿದರು.
![ಬ್ಯಾರೇಜ್ ಕಾಮಗಾರಿ ಸ್ಥಳ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ Ramesh jarakiholi](https://etvbharatimages.akamaized.net/etvbharat/prod-images/768-512-11:43:09:1593670389-kn-surpur-02-01-av-minister-visit-river-kac10022mp4-01072020161122-0107f-1593600082-27.jpg)
Ramesh jarakiholi
ಮಧ್ಯಾಹ್ನ ಮೂರು ಗಂಟೆ ವೇಳೆಗೆ ಆಗಮಿಸಿದ ಸಚಿವರು, ಕೃಷ್ಣಾ ನದಿ ಸಮೀಪ ಸ್ಥಳ ಪರಿಶೀಲನೆ ಜೊತೆಗೆ ಕಾಮಗಾರಿಯ ನಕ್ಷೆ ವೀಕ್ಷಿಸಿ ಬ್ಯಾರೇಜ್ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕೃಷ್ಣಾ ನದಿಯಲ್ಲಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣದಿಂದ ಈ ಭಾಗದ ಜನರಿಗೆ ಹಲವಾರು ರೀತಿಯಲ್ಲಿ ಅನುಕೂಲವಾಗಲಿದೆ. ಆದಷ್ಟು ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.