ಗುರುಮಠಕಲ್ : ಗುರುಮಠಕಲ್ ತಾಲೂಕಿನ ಹಿಂದುಪರ ಸಂಘಟನೆಯ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ಪ್ರಯುಕ್ತ ಶಿವಾಜಿ ಮಹಾರಾಜರ ಮೂರ್ತಿಯ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ತಾಲೂಕಿನ ಹಿಂದುಪರ ಸಂಘಟನೆಗಳು ಪಟ್ಟಣದ ಬಸವೇಶ್ವರ ವೃತ್ತದಿಂದ ಗಾಂಧಿ ಮೈದಾನದವರೆಗೆ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ರಥ ಸಾರಥ್ಯದಲ್ಲಿ ಅದ್ಧೂರಿ ಮೆರವಣಿಗೆ ನಡೆದವು.
ಮೇರಾ ಭಾರತ ಮಹಾನ್ ವೇದಿಕೆಯ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸುವ ಸಂದರ್ಭದಲ್ಲಿ ಕೇಸರಿ ಧ್ವಜಗಳು ರಾರಾಜಿಸಿದವು. ಕೇಸರಿ ಶಾಲುಗಳನ್ನು ಭುಜದ ಮೇಲೆ ಹಾಕಿಕೊಂಡು ಮೆರವಣಿಗೆಯಲ್ಲಿ ಅನೇಕರು ಭಾಗವಹಿಸಿದ್ದರು.
ಮಹಾರಾಷ್ಟ್ರದಿಂದ ಆಗಮಿಸಿದ್ದ ಹೆಣ್ಣುಮಕ್ಕಳ ಡೊಳ್ಳುಕುಣಿತ ಜನರ ಆಕರ್ಷಣೆಯಾಗಿತ್ತು. ಡಿಜೆ ಸೌಂಡ್ಗೆ ಭರ್ಜರಿ ಡ್ಯಾನ್ಸ್ ಮಾಡಿ ಯುವಕರು ಕುಣಿದು ಕುಪ್ಪಳಿಸಿ, ಮೇರಾ ಭಾರತ ಮಹಾನ್, ಜೈ ಶ್ರೀರಾಮ್ ಘೋಷಣೆ ಮೊಳಗಿಸಿದರು.
ತಾಲೂಕಿನ ಎಲ್ಲ ಗ್ರಾಮಗಳಿಂದ ಸುಮಾರು 6000 ಸಾವಿರಕ್ಕೂ ಹೆಚ್ಚು ಜನರು ಶಿವಾಜಿ ಮಹಾರಾಜರ ಜಯಂತಿಯಲ್ಲಿ ಪಾಲ್ಗೊಂಡಿದ್ದರು. ಪಕ್ಷಬೇಧ ಮರೆತು ಎಲ್ಲ ಪಕ್ಷದ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಶೇಷವಾಗಿ ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ಭಾಗವಹಿಸಿ ಹಿಂದೂ-ಮುಸ್ಲಿಂ ಸಹೋದರತ್ವದ ಭಾವನೆ ಮೂಡಿಸಿದರು.