ಕರ್ನಾಟಕ

karnataka

ಕಳ್ಳತನ ಆರೋಪ: ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

By

Published : Sep 12, 2019, 6:29 PM IST

ಹಾಸ್ಟೆಲ್​ ಅಡುಗೆ ಸಹಾಯಕಿಯ ಮೊಬೈಲ್ ಕಳ್ಳತನವಾಗಿದ್ದ ಹಿನ್ನೆಲೆ ಆರೋಪ ಎದುರಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆ ಮುಂದೆ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಜಿಲ್ಲೆಯ ಶಹಾಪುರ ತಾಲೂಕಿನ ಅರಳಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕಳ್ಳತನ ಆರೋಪಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಯಾದಗಿರಿ: ಸ್ನೇಹಿತರ ಎದುರು ಕಳ್ಳತನ ಆರೋಪ ಎದುರಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆ ಮುಂದೆ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಶಹಾಪುರ ತಾಲೂಕಿನ ಅರಳಹಳ್ಳಿ ಗ್ರಾಮದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವಳು ಎನ್ನಲಾಗಿದೆ.

ಕಳ್ಳತನ ಆರೋಪ: ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ ನಗರದ ಎನ್.ವಿ ಶಾಲೆಯಲ್ಲಿ ಒಂಭತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ವಾಸವಿದ್ದಳು. ಹಾಸ್ಟೆಲ್​ ಅಡುಗೆ ಸಹಾಯಕಿಯೊಬ್ಬರ ಮೊಬೈಲ್ ಕಳ್ಳತನವಾಗಿತ್ತು. ಈ ವಿದ್ಯಾರ್ಥಿನಿಯೇ ಮೊಬೈಲ್ ಕದ್ದಿದ್ದಾಳೆ ಎಂದು ವಿದ್ಯಾರ್ಥಿಗಳ ಬಳಗದಲ್ಲಿ ಆರೋಪ ಕೇಳಿಬಂದಿತ್ತು. ನಾನು ಕಳ್ಳತನ ಮಾಡಿಲ್ಲ ಎಂದು ಆಕೆ ಹೇಳಿದ್ದಾಳೆ. ಆದ್ರೆ ಆಕೆಯ ಬ್ಯಾಗ್​​ನಲ್ಲಿ ಮೊಬೈಲ್​ ಪತ್ತೆಯಾಗಿತ್ತು ಎನ್ನಲಾಗಿದೆ.

ಬಳಿಕ ಈ ವಿಷಯವನ್ನ ಆಕೆ ಮನೆಗೆ ಹಿಂತಿರುಗಿ ತಂದೆಗೆ ತಿಳಿಸಿದ್ದಾಳೆ. ತಂದೆ ವಸತಿ ನಿಲಯದ ಮೇಲ್ವಿಚಾರಕರ ಜೊತೆ ಮಾತನಾಡಿ, ನಾನು ಮಗಳ ಜೊತೆ ಬಂದು ಸಮಸ್ಯೆ ಬಗೆಹರಿಸುವೆ ಎಂದು ಹೇಳಿದ್ದಾರೆ. ಅಷ್ಟರಲ್ಲಿ ಮನೆ ಮುಂದಿರುವ ಬಾವಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಇನ್ನು ಈ ಸಂಬಂಧ ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details