ಕರ್ನಾಟಕ

karnataka

By

Published : Dec 14, 2020, 7:25 PM IST

ETV Bharat / state

ಸುರಪುರ: ಈಜಲು ತೆರಳಿದ್ದ ಯುವಕ ನೀರುಪಾಲು

ನದಿಯಲ್ಲಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಕೊಚ್ಚಿಹೋಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಸುರಪುರ ತಾಲೂಕಿನ ವಾಗಣಗೇರಾ ಗ್ರಾಮದಲ್ಲಿ ನಡೆದಿದೆ.

ಯುವಕ ನೀರುಪಾಲು
ಯುವಕ ನೀರುಪಾಲು

ಸುರಪುರ:ಕೃಷ್ಣಾ ನದಿಗೆ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ತಾಲೂಕಿನ ವಾಗಣಗೇರಾ ಗ್ರಾಮದಲ್ಲಿ ನಡೆದಿದೆ.

ಮಹಾಂತೇಶ ನಂದಪ್ಪ ಕವಡಿಮಟ್ಟಿ (19)ಮೃತ ಯುವಕ. ವಾಗಣಗೇರಾ ಗ್ರಾಮದ ಜನರು ಹನುಮಾನ್​ ದೇವರ ಕಾರ್ತಿಕೋತ್ಸವದ ನಿಮಿತ್ತ ಸೆಳ್ಳಗಿ ಬಳಿಯ ಕೃಷ್ಣಾ ನದಿಗೆ ದೇವರ ಗಂಗಾಸ್ನಾನಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಮಹಾಂತೇಶ ಈಜಲು ಹೋಗಿದ್ದು, ನೀರಿನಲ್ಲಿ ಕೊಚ್ಚಿಹೋಗಿದ್ದಾನೆ.

ಇನ್ನು ಮಹಾಂತೇಶ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಿದ ಬಳಿಕ ಸ್ಥಳದಿಂದ ಅರ್ಧ ಕಿ.ಮೀ ದೂರದಲ್ಲಿ ಶವ ಪತ್ತೆಯಾಗಿದೆ. ಬಳಿಕ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಆಕಂದ್ರನ ಮುಗಿಲು ಮುಟ್ಟಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

...view details