ಕರ್ನಾಟಕ

karnataka

ETV Bharat / state

ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ: ಹೆಚ್ಚಿದ ಪ್ರವಾಹ ಭೀತಿ - ಯಾದಗಿರಿ ಸುದ್ದಿ

ಯಾದಗಿರಿ ಜಿಲ್ಲೆಯ ಕೃಷ್ಣಾ ನದಿ ಹಾಗೂ ಭೀಮಾ ನದಿ ತುಂಬಿ ಹರಿಯುತ್ತಿದ್ದು, ಎರಡು ನದಿಗಳ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಹೆಚ್ಚಿದೆ.

Water released from Basavasagar reservoir to Krishna river
ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ: ಹೆಚ್ಚಿದ ಪ್ರವಾಹ ಭೀತಿ

By

Published : Aug 19, 2020, 10:11 PM IST

ಯಾದಗಿರಿ:ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯಿರುವ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2 ಲಕ್ಷದ 95 ಸಾವಿರ ಕ್ಯುಸೆಕ್ ನೀರು ಹರಿ ಬಿಡಲಾಗಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿದೆ.

ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ: ಹೆಚ್ಚಿದ ಪ್ರವಾಹ ಭೀತಿ

ಈಗಾಗಲೇ ನದಿ ತೀರದ ಸಾವಿರಾರು ಎಕರೆ ಜಮೀನಿಗೆ ನೀರು ನುಗ್ಗಿ ರೈತರು ಕಂಗಾಲಾಗಿದ್ದಾರೆ. ಒಟ್ಟು 33.313 ಟಿಎಂಸಿ ಸಾಮರ್ಥ್ಯ ಹೊಂದಿರುವ ಬಸವಸಾಗರ ಜಲಾಶದಲ್ಲೀಗ 24 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಂನ ಒಳಹರಿವು ಕೂಡ 2 ಲಕ್ಷದ 70 ಸಾವಿರದಷ್ಟು ಹೆಚ್ಚಾಗಿದೆ. ಕೃಷ್ಣಾ ನದಿ ಪ್ರವಾಹ ಸಂಕಷ್ಟ ಒಂದೆಡೆಯಾದರೆ, ಭೀಮಾ ನದಿ ಕೂಡಾ ತುಂಬಿ ಹರಿಯುತ್ತಿರುವುದರಿಂದ ಜಿಲ್ಲೆಯ ಎರಡು ನದಿಗಳ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಹೆಚ್ಚಿಸಿದೆ.

ಪ್ರವಾಹ ಭೀತಿ ಹಿನ್ನೆಲೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ನದಿ ತೀರಕ್ಕೆ ಜನ ಮತ್ತು ಜಾನುವಾರುಗಳು ತೆರಳದಂತೆ ಸೂಚಿಸಿದೆ.

ABOUT THE AUTHOR

...view details