ಕರ್ನಾಟಕ

karnataka

By

Published : Apr 25, 2020, 11:49 AM IST

ETV Bharat / state

ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದ ಯಾದಗಿರಿ ಡಿಸಿ

ಯಾದಗಿರಿ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಕೊರೊನಾ ವೈರಸ್ ತಡೆಗಟ್ಟಲು​ ಜಿಲ್ಲಾಡಳಿತ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದ್ರು.

Yadagiri District Collector MKurma Rao Measures Corona Prevention
ಯಾದಗಿರಿ: ಕೊರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

ಯಾದಗಿರಿ:ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಇಂದು ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಕೊರೊನಾ ವೈರಸ್‌ ಹರಡುವಿಕೆಯನ್ನ ತಡೆಗಟ್ಟಲು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.

ಯಾದಗಿರಿಯಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

ಜಿಲ್ಲೆಯ ಶಹಾಪೂರ ತಾಲ್ಲೂಕಿನ ಹತ್ತಿಗುಡೂರ ಆರೋಗ್ಯ ಉಪ ಕೇಂದ್ರ ಮತ್ತು ಕೊಂಗಂಡಿ ಆರೋಗ್ಯ ಉಪ ಕೇಂದ್ರಕ್ಕೆ ಭೇಟಿ ನೀಡಿ, ಆರೋಗ್ಯ ತಪಾಸಣೆ ಕುರಿತು ಮಾಹಿತಿ ಪಡೆದರು. ನಂತರ ಕೊಂಗಂಡಿ ಗ್ರಾಮಕ್ಕೆ ತೆರಳಿ ಏಪ್ರಿಲ್‌ 7 ರಂದು ಮೃತಪಟ್ಟಿದ್ದ ಮಗುವಿನ ಪೋಷಕರಿಗೆ ಸಾಂತ್ವನ ಹೇಳಿದರು.

ಕೊಳ್ಳೂರು ಎಂ. ಚೆಕ್​ಪೋಸ್ಟ್​ಗೆ ಭೇಟಿ ನೀಡಿ, ಸಿಬ್ಬಂದಿ ಕಾರ್ಯನಿರ್ವಹಣೆ ಹಾಗೂ ವಾಹನಗಳ ಸಂಚಾರ ಕುರಿತಂತೆ ಪರಿಶೀಲಿಸಿದರು. ಇದೇ ವೇಳೆ ವಡಗೇರಾ ತಾಲ್ಲೂಕಿನ ನಾಯ್ಕಲ್ ಗ್ರಾಮದ ಹೊಲಗಳಿಗೆ ಭೇಟಿ ನೀಡಿ, ಆಲಿಕಲ್ಲು ಮಳೆಯಿಂದ ಉಂಟಾದ ಬೆಳೆಹಾನಿ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದಿದ್ದಾರೆ.

ABOUT THE AUTHOR

...view details