ಕರ್ನಾಟಕ

karnataka

ETV Bharat / state

ಯಾದಗಿರಿ: ಈಜು ಬಾರದೆ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು - two youth died without knowing swimming at yadagiri

ಹೋಳಿ ಹುಣ್ಣಿಮೆ ಅಂಗವಾಗಿ ಬಣ್ಣದಾಟ ಆಡಿ, ಸ್ನಾನ ಮಾಡಲು ಗ್ರಾಮದ ಹೊರವಲಯದ ಕೆರೆಗೆ ಹೋಗಿದ್ದ ಯುವಕರಿಬ್ಬರು ಈಜು ಬಾರದೆ ಮೃತಪಟ್ಟಿದ್ದಾರೆ.

Two youth drowned in lake without knowing swimming
ಈಜು ಬಾರದೆ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

By

Published : Mar 22, 2022, 7:25 PM IST

ಯಾದಗಿರಿ:ಹೋಳಿ ಹುಣ್ಣಿಮೆ ಅಂಗವಾಗಿ ಗೆಳೆಯರೊಂದಿಗೆ ಬಣ್ಣದಾಟ ಆಡಿ ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಸ್ನಾನ ಮಾಡಲು ಹೋದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಈಜು ಬಾರದ ಕಾರಣ ಇಬ್ಬರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಈ ಘಟನೆ ಯಾದಗಿರಿ ತಾಲೂಕಿನ ಬಾಚವಾರ ಗ್ರಾಮದಲ್ಲಿ ಶನಿವಾರ ನಡೆದಿದೆ.

ಘಟನಾ ಸ್ಥಳದ ದೃಶ್ಯ

ಮಾರ್ತಂಡಪ್ಪ(19), ಸಾಬಣ್ಣ (18) ಕೆರೆಯಲ್ಲಿ ಮುಳುಗಿ ಮೃತಪಟ್ಟ ಯುವಕರು. 12ಕ್ಕೂ ಹೆಚ್ಚು ಜನರ ಗುಂಪಿನ ಯುವಕರು ಎಂದಿನಂತೆ ಹೋಳಿ ಹುಣ್ಣಿಮೆ ಅಂಗವಾಗಿ ಬಣ್ಣದಾಟ ಆಡಿ, ಸ್ನಾನ ಮಾಡಲು ಗ್ರಾಮದ ಹೊರವಲಯದ ಕೆರೆಗೆ ಹೋಗಿದ್ದಾರೆ. ಆದ್ರೆ ಈಜಲು ಬಾರದೆ ಇವರಿಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ:ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರು ಪಾಲು

ಮೃತ ಯುವಕ ಸಾಬಣ್ಣನ ದೇಹ ಪತ್ತೆಯಾಗಿದೆ. ಇನ್ನೋರ್ವ ವ್ಯಕ್ತಿಯ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details