ಯಾದಗಿರಿ: ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯ ಗುರಮಿಠಕಲ್ ತಾಲೂಕು ಬೆಳಗೇರಾ ಗ್ರಾಮದ ಯುವಕನೋರ್ವ ವಿನೂತನವಾಗಿ ಜನ್ಮದಿನ ಆಚರಿಸಿಕೊಂಡಿದ್ದಾನೆ.
ವಿದ್ಯಾರ್ಥಿಗಳಿಗೆ ಬುಕ್-ಪೆನ್ ವಿತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯಾದಗಿರಿ ಯುವಕ! - Young man celebrating his birthday at Yadagari school
ಬೆಳಗೇರಾ ಗ್ರಾಮದ ಯುವಕ ಆಂಜನೇಯ ನಾಯ್ಕೋಡಿ, ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮತ್ತು ಶಿಕ್ಷಕರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಈ ವೇಳೆ ಶಾಲೆಯ 48 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ನೋಟ್ ಬುಕ್ ಮತ್ತು ಪೆನ್ ವಿತರಿಸಿದ್ದಾನೆ. ಈ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸುವ ಹೊಸ ಪ್ರಯತ್ನ ಮಾಡಿದ್ದಾನೆ.
![ವಿದ್ಯಾರ್ಥಿಗಳಿಗೆ ಬುಕ್-ಪೆನ್ ವಿತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯಾದಗಿರಿ ಯುವಕ! Young man celebrating his birthday at Yadagari school](https://etvbharatimages.akamaized.net/etvbharat/prod-images/768-512-5305062-thumbnail-3x2-hrs.jpg)
ಪೆನ್ನು, ಪುಸ್ತಕ ವಿತರಿಸಿ ಹುಟ್ಟುಹಬ್ಬ ಆಚರಣೆ
ಪೆನ್ನು, ಪುಸ್ತಕ ವಿತರಿಸಿ ಹುಟ್ಟುಹಬ್ಬ ಆಚರಣೆ
ಬೆಳಗೇರಾ ಗ್ರಾಮದ ಯುವಕ ಆಂಜನೇಯ ನಾಯ್ಕೋಡಿ, ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮತ್ತು ಶಿಕ್ಷಕರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಈ ವೇಳೆ ಶಾಲೆಯ 48 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ನೋಟ್ ಬುಕ್ ಮತ್ತು ಪೆನ್ ವಿತರಿಸಿದ್ದಾನೆ. ಈ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸುವ ಹೊಸ ಪ್ರಯತ್ನ ಮಾಡಿದ್ದಾನೆ.
ಕಾರ್ಯಕ್ರಮದಲ್ಲಿ ಬೆಳಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ, ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ, ಶಿಕ್ಷಕ ವೆಂಕಟೇಶ್ ಸೇರಿದಂತೆ ಗ್ರಾಮದ ಯುವಕರು, ಮುಖಂಡರು ಇದ್ದರು.