ಕರ್ನಾಟಕ

karnataka

ETV Bharat / sukhibhava

ನೀವು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ: ರಕ್ತಹೀನತೆ ಸಮಸ್ಯೆಗೆ ಇಲ್ಲಿದೆ ಸರಳ ಪರಿಹಾರ..

ಜನರಲ್ಲಿ ಸಾಮಾನ್ಯ ಸಮಸ್ಯೆಯಾಗಿ ಕಾಣಿಸಿಕೊಳ್ಳುತ್ತಿರುವ ರಕ್ತಹೀನತೆ - ರಕ್ತಹೀನತೆಯಿಂದ ಬಳಲುತ್ತಿರುವ ದೇಶದ ಶೇ 67 ರಷ್ಟು ಮಕ್ಕಳು ಮತ್ತು ಶೇ 57 ರಷ್ಟು ಮಹಿಳೆಯರು - ರಕ್ತಹೀನತೆಯನ್ನು ಕಡಿಮೆ ಮಾಡಲು ಬಳಸಿ ಒಣದ್ರಾಕ್ಷಿ.

By

Published : Feb 15, 2023, 4:39 PM IST

Eat raisins to reduce anemia
ನೀವು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ:ರಕ್ತಹೀನತೆ ಸಮಸ್ಯೆಗೆ ಇಲ್ಲಿದೆ ಸರಳ ಪರಿಹಾರ..

ರಕ್ತಹೀನತೆ ಒಂದು ಸಾಮಾನ್ಯ ಸಮಸ್ಯೆಯಾಗಿದೆ. ವಿಶೇಷವಾಗಿ ಮಕ್ಕಳು ಮತ್ತು ಮಹಿಳೆಯರು ಈ ಸಮಸ್ಯೆಯನ್ನು ಹೆಚ್ಚಾಗಿ ಎದುರಿಸುತ್ತಿರುತ್ತಾರೆ. ನಮ್ಮ ದೇಶದಲ್ಲಿ 6 ತಿಂಗಳಿಂದ 6 ವರ್ಷ ವಯಸ್ಸಿನ ಶೇ 67 ರಷ್ಟು ಮಕ್ಕಳು ಮತ್ತು ಶೇ 57 ರಷ್ಟು ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಇದಕ್ಕೆ ಮುಖ್ಯ ಕಾರಣವೆಂದರೆ ದೇಹದಲ್ಲಿ ಕೆಂಪು ರಕ್ತ ಕಣಗಳ ಅಸಮರ್ಪಕ ಉತ್ಪಾದನೆ ಮತ್ತು ದೇಹದಲ್ಲಿನ ರಕ್ತದ ನಷ್ಟವೂ ಇದಕ್ಕೆ ಕಾರಣವಾಗಬಹುದು. ಜೊತೆಗೆ ದೇಹದಲ್ಲಿ ಕಬ್ಬಿಣಾಂಶದ ಕೊರತೆಯು ಅನೇಕ ಜನರಲ್ಲಿ ರಕ್ತಹೀನತೆಗೆ ಪ್ರಾಮುಖ ಕಾರಣವಾಗುತ್ತದೆ.

ನಮ್ಮ ದೇಹದಲ್ಲಿ ಕಬ್ಬಿಣಾಂಶದ ಕೊರತೆಯಿದ್ದರೆ, ಕೆಂಪು ರಕ್ತ ಕಣಗಳು ಸಾಕಷ್ಟು ಸಂಖ್ಯೆಯಲ್ಲಿ ಉತ್ಪತ್ತಿಯಾಗುವುದಿಲ್ಲ. ಇದರಿಂದ ದಣಿವು ಮತ್ತು ಆಯಾಸದಂತಹ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ದೇಹದಲ್ಲಿ ಕಬ್ಬಿಣಾಂಶವನ್ನು ಹೆಚ್ಚಿಸಿಕೊಳ್ಳಲು ನೆನೆಸಿದ ಒಣದ್ರಾಕ್ಷಿ ಸೇವನೆ ಮಾಡುವುದು ಉತ್ತಮವಾದ ಮಾರ್ಗವಾಗಿದೆ. ಒಣದ್ರಾಕ್ಷಿಯು ಕಬ್ಬಿಣಾಂಶದ ಜೊತೆಗೆ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ನಿತ್ಯ 10 ರಿಂದ 15 ಒಣದ್ರಾಕ್ಷಿಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಗ್ಗೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜವನ್ನು ನೀಡುತ್ತದೆ. ಇದು ಕಬ್ಬಿಣಾಂಶದ ಕೊರತೆಯನ್ನು ನಿಗಿಸುತ್ತದೆ. ಪರಿಣಾಮವಾಗಿ ದೇಹದಲ್ಲಿ ರಕ್ತಹೀನತೆಯನ್ನು ಕಡಿಮೆಯಾಗುತ್ತದೆ.

ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ಆಗುವ ಪ್ರಯೋಜನಗಳು:ಒಣದ್ರಾಕ್ಷಿ ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದು ಕಬ್ಬಿಣದ ಜೊತೆಗೆ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವುದರಿಂದ ಇವು ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ. ಕಪ್ಪು ಒಣದ್ರಾಕ್ಷಿಯಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ ಮತ್ತು ಕ್ಯಾಲ್ಸಿಯಂ ಅನ್ನು ಹೊಂದಿದ್ದು ಇವು ಮೂಳೆಯ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಕಪ್ಪು ಒಣದ್ರಾಕ್ಷಿಯಲ್ಲಿ ಕಬ್ಬಿಣದ ಜೊತೆಗೆ ವಿಟಮಿನ್ ಸಿ ಇರುತ್ತದೆ. ವಿಟಮಿನ್ ಸಿ ದೇಹವು ಖನಿಜಗಳನ್ನು ತ್ವರಿತವಾಗಿ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಪರಿಣಾಮವಾಗಿ, ಕೂದಲು ಆರೋಗ್ಯಕರವಾಗಿರುವಂತೆ ಮಾಡುತ್ತದೆ. ಒಣದ್ರಾಕ್ಷಿಯಲ್ಲಿರುವ ಪೊಟ್ಯಾಸಿಯಮ್ ರಕ್ತದಲ್ಲಿ ಸೋಡಿಯಂ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದ್ದರಿಂದ ನೀವು ಒಣಗಿದ ಒಣದ್ರಾಕ್ಷಿಯನ್ನು ನಿಯಮಿತವಾಗಿ ಸೇವಿಸಿದರೆ ರಕ್ತದೊತ್ತಡ ಕಡಿಮೆಯಾಗುತ್ತದೆ.

ಪ್ರತಿದಿನ 10 ರಿಂದ 15 ಒಣದ್ರಾಕ್ಷಿಗಳನ್ನು ತಿನ್ನುವುದು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಅವು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸಹ ಕಡಿಮೆ ಮಾಡುತ್ತವೆ. ಕೊಲೆಸ್ಟ್ರಾಲ್ ಕಡಿಮೆಯಾದರೆ, ರಕ್ತನಾಳಗಳಲ್ಲಿ ಪ್ಲೇಕ್ ಗಳ ರಚನೆಯೂ ಕಡಿಮೆಯಾಗುತ್ತದೆ. ಇದು ಹೃದಯಕ್ಕೆ ರಕ್ತದ ಹರಿವನ್ನು ಸರಾಗಗೊಳಿಸುತ್ತದೆ.ಕಪ್ಪು ಒಣದ್ರಾಕ್ಷಿಯಲ್ಲಿ ಐದು ಫೈಟೊಕೆಮಿಕಲ್ಸ್, ಒಲಿಯನೋಲಿಕ್ ಆಮ್ಲದಂತಹ ಉತ್ಕರ್ಷಣ ನಿರೋಧಕಗಳಿವೆ. ಅಮೆರಿಕದಲ್ಲಿ ನಡೆಸಿದ ಅಧ್ಯಯ ಒಂದರಲ್ಲಿ ಇವು ಹಲ್ಲುಗಳನ್ನು ಹುಳುಕಾಗದಂತೆ ರಕ್ಷಿಸುತ್ತವೆ ಎಂದು ತಿಳಿದುಬಂದಿದೆ.

ಒಣದ್ರಾಕ್ಷಿಯಲ್ಲಿ ನಾರಿನಂಶ ಅಧಿಕವಾಗಿರುವುದರಿಂದ. ಇದು ಕರುಳಿನ ಚಲನೆಯನ್ನು ಸುಗಮಗೊಳಿಸುತ್ತದೆ. ಒಣದ್ರಾಕ್ಷಿ ಸೇವನೆಯಿಂದ ಮಹಿಳೆಯರಲ್ಲಿ ಮುಟ್ಟಿನ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ದೇಹದ ಶಕ್ತಿಯನ್ನು ಸಹ ಹೆಚ್ಚಿಸುತ್ತದೆ. ಒಣದ್ರಾಕ್ಷಿ ಎದೆಯುರಿ ಮತ್ತು ಅಜೀರ್ಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:ಗರ್ಭಿಣಿಯರ ಈ ಪೋಷಕಾಂಶಗಳನ್ನು ಸೇವಿಸುವುದರಿಂದ ಮಕ್ಕಳು ಚುರುಕಾಗಿ ಹುಟ್ಟುತ್ತವೆಯಂತೆ..!

ABOUT THE AUTHOR

...view details