ನಿರೀಕ್ಷೆಯಂತೆ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಹಾಗೂ ಆರ್ಟಿಕಲ್ 370 ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಇದು ಪ್ರತಿಪಕ್ಷಗಳು ಹಾಗೂ ಕಾಶ್ಮೀರದ ವಿವಿಧ ಪಕ್ಷಗಳ ನಾಯಕರನ್ನು ಕೆರಳುವಂತೆ ಮಾಡಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಸರ್ಕಾರ ಕಾಶ್ಮೀರದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದೆ.