ಕೇಂದ್ರದ ಮೆಗಾ ಪ್ಯಾಕೇಜ್ನಿಂದ ಸಾಮಾನ್ಯ ಜನರಿಗೆ ಪ್ರಯೋಜನವಾಗಿಲ್ಲ: ಹರಿಯಾಣ ಕಾಂಗ್ರೆಸ್ ಅಧ್ಯಕ್ಷೆ - Haryana Congress President Kumari Sheilja
ಹೈದರಾಬಾದ್: ಈಟಿವಿ ಭಾರತ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಹರಿಯಾಣ ಕಾಂಗ್ರೆಸ್ ಅಧ್ಯಕ್ಷೆ ಶೈಲಜಾ ಕುಮಾರಿ, ಕೇಂದ್ರದ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್ನಿಂದ ಸಾಮಾನ್ಯ ಜನತೆ ಹಾಗೂ ಬಡವರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಹೊಂದಾಣಿಕೆಯಿಲ್ಲದೆ ಕೋವಿಡ್-19 ಲಾಕ್ಡೌನ್ನಿಂದಾಗಿ ವಲಸೆ ಕಾರ್ಮಿಕರು ಸಂಕಷ್ಟ ಎದುರಿಸುವಂತಾಗಿದೆ. ಹರಿಯಾಣ ಬಿಜೆಪಿ ಸರ್ಕಾರವು ರೈತರ ನೋವುಗಳನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಿಸಿದೆ ಎಂದು ಕಾಂಗ್ರೆಸ್ ನಾಯಕಿ ಆರೋಪಿಸಿದ್ದಾರೆ.