ಅಯೋಧ್ಯೆ ಜಗಮಗ: ಪಟಾಕಿ ಸಿಡಿಸಿ ಸಂಭ್ರಮಿಸಿದ ಸಿಎಂ ಯೋಗಿ ಆದಿತ್ಯನಾಥ್
ಅಯೋಧ್ಯೆ: ನಾಳೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡುವ ಐತಿಹಾಸಿಕ ಕಾರ್ಯಕ್ರಮ ನಡೆಯಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಕಲ ರೀತಿಯ ತಯಾರಿಗಳು ನಡೆದಿವೆ. ರಾಮಜನ್ಮಭೂಮಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಅಯೋಧ್ಯೆ ನಗರಿ ದೀಪೋತ್ಸವದ ಬೆಳಕಿನಲ್ಲಿ ಜಗಮಗಿಸುತ್ತಿದೆ. ಈ ಮದ್ಯೆ,ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ನಿವಾಸದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.