ಕರ್ನಾಟಕ

karnataka

By

Published : Aug 7, 2020, 7:46 PM IST

ETV Bharat / videos

ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು, ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ

ಕೊಲ್ಹಾಪುರ (ಮಹಾರಾಷ್ಟ್ರ): ಕಳೆದೊಂದು ವಾರದಿಂದ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಎಲ್ಲ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕೊಲ್ಹಾಪುರದಲ್ಲಿರುವ ಪಂಚಗಂಗಾ ನದಿಯೂ ಅಪಾಯದ ಮಟ್ಟ ದಾಟಿದೆ. ಈಗಾಗಲೇ 7 ಸಾವಿರ ಕ್ಯೂಸೆಕ್​​ಗಿಂತಲೂ ಹೆಚ್ಚಿನ ನೀರು ಹೊರಬಿಡಲಾಗುತ್ತಿದೆ. ಜಿಲ್ಲೆಯ 25 ಗ್ರಾಮಗಳಿಂದ 5 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ನದಿಯಿಂದ ಹೊರಬರುತ್ತಿರುವ ನೀರು ನೇರವಾಗಿ ಕರ್ನಾಟಕದ ಕೃಷ್ಣಾ ನದಿ ಮೂಲಕ ಆಲಮಟ್ಟಿ ಡ್ಯಾಂ ಸೇರಿಕೊಳ್ಳುತ್ತಿದೆ. ಇದರಿಂದ ರಾಜ್ಯದ ಉತ್ತರ ಕರ್ನಾಟಕದಲ್ಲಿ ಭಾರಿ ಪ್ರಮಾಣದ ನೆರೆಹಾವಳಿ ಪರಿಸ್ಥಿತಿ ನಿರ್ಮಾಣಗೊಂಡಿದೆ.

ABOUT THE AUTHOR

...view details