ಅಂಬಾಲ (ಹರಿಯಾಣ): ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಿಯಾಣದ ಅಂಬಾಲದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಪೊಲೀಸರು ಜಲ ಫಿರಂಗಿ ಪ್ರಯೋಗಿಸಿದ್ದರು, ದೆಹಲಿಗೆ ತೆರಳದಂತೆ ತಡೆದಿದ್ದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾನಿರತ ರೈತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.