ಸುಪ್ರೀಂ ತೀರ್ಪಿಗೆ ಸಂತಸ: ರಮೇಶ್ ಜಾರಕಿಹೊಳಿ ನಿವಾಸದ ಮುಂದೆ ಸಂಭ್ರಮಾಚರಣೆ - ಅನರ್ಹ ಶಾಸಕರ ಕ್ಷೇತ್ರದಲ್ಲಿ ಉಪಚುನಾವಣೆ
ಬೆಂಗಳೂರು: ಅನರ್ಹರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂಕೋರ್ಟ್ ಅವಕಾಶ ನೀಡಿದ ಹಿನ್ನೆಲೆ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಿವಾಸದ ಎದುರು ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಕೋರ್ಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ಬೆಂಗಳೂರಿನ ಮಿನಿಸ್ಟರ್ಸ್ ಕ್ವಾಟ್ರಸ್ನಲ್ಲಿರುವ ರಮೇಶ್ ಜಾರಕಿಹೊಳಿ ನಿವಾಸದ ಮುಂಭಾಗ ಸೇರಿದ ಕಾರ್ಯಕರ್ತರು ಹೋಳಿಗೆ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.